ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಸದಸ್ಯರಾಗಿದ್ದ ಧೃವನಾರಾಯಣ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಮೂಲಕ ಜನರ ಪ್ರೀತಿ ವಿಶ್ವಾಸವನ್ನು ಸಂಪಾದಿಸಿದ್ದಾರೆ.
ಸಂಸದರಾಗಿ ಇಡೀ ದೇಶದಲ್ಲೇ ನಂ.೧ ಸ್ಥಾನ ಪಡೆದಿದ್ದವರು ಧೃವನಾರಾಯಣ್. ಅದೇ ರೀತಿಯ ಹೆಸರನ್ನು ಸುನಿಲ್ ಬೋಸ್ ಅವರು ಗಳಿಸಬೇಕು ಎಂಬುದು ನಮ್ಮೆಲ್ಲ ಇಚ್ಚೆ ಎಂದು ಅಭಿಪ್ರಾಯ ತಿಳಿಸಿದರು.
ಚಾಮರಾಜನಗರದ ೮ ವಿಧಾನಸಭಾ ಕ್ಷೇತ್ರದಲ್ಲಿ ೭ರಲ್ಲಿ ನಮ್ಮ ಪಕ್ಷದ ಶಾಸಕರಿದ್ದಾರೆ. ಹನೂರಿನಲ್ಲಿ ಮಾತ್ರ ರವೀಂದ್ರ ಸೋತರು. ಆದರೆ ಈ ಬಾರಿ ಹನೂರಿನಲ್ಲೂ ಬಹುಮತ ಸಿಗುತ್ತದೆ ಎಂಬ ವಿಶ್ವಾಸ ಇದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಸುನಿಲ್ ಬೋಸ್ ಮೂರು ಲಕ್ಷ ಮತಗಳ ಅಂತರದಿಂದ ಗೆದ್ದು ಲೋಕಸಭೆಗೆ ಪ್ರವೇಶ ಮಾಡುವ ಮೂಲಕ ರಾಜಕೀಯ ಪ್ರಾರಂಭ ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.
ಈ ವೇಳೆ ಬೃಹತ್ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸುನಿಲ್ ಬೋಸ್ ಜತೆಗಿದ್ದರು
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…