ಚಾಮರಾಜನಗರ

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ನಗರ ಸನಿಹದ ಮಲ್ಲಯ್ಯನಪುರ ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತ್ತುಗೊಳಿಸಲು ಹಾಗೂ ವಿವಿಧ ಇಲಾಖೆಗಳ ನಾಲ್ವರು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.

ಮಲ್ಲಯ್ಯನಪುರ ಗ್ರಾಮದ ಕ್ವಾಲಿಟಿ ನ್ಯಾಯಬೆಲೆ ಅಂಗಡಿ ವಿತರಕರಾದ ಮಲ್ಲೇದೇವರು ಅವರು ಆಹಾರ ಪದಾರ್ಥವನ್ನು ಪಡಿತರದಾರರಿಗೆ ಸಮರ್ಪಕವಾಗಿ ವಿತರಣೆ ಮಾಡದಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಚಾರಣೆ ಕಾಯ್ದಿರಿಸಿ ಪರವಾನಗಿಯನ್ನು ಇಲಾಖೆ ಉಪನಿರ್ದೇಶಕರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಲತಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಆದೇಶಿಸಿದ್ದಾರೆ. ಆಯೋಗದ ಶಿಫಾರಸು ಆಧರಿಸಿ ಈ ಕ್ರಮ ವಹಿಸಲಾಗಿದೆ.

ಇದೇ ರೀತಿ, ಆಹಾರ ದಾಸ್ತಾನು ವ್ಯತ್ಯಾಸ, ವಹಿಗಳನ್ನು ನಿರ್ವಹಿಸದಿರುವುದು, ಇನ್ನಿತರ ನ್ಯೂನತೆಗಳ ಕಾರಣದಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಓರ್ವ ಹಾಸ್ಟೆಲ್ ವಾರ್ಡನ್, ಸರ್ಕಾರಿ ಶಾಲೆಯ ಮಧ್ಯಾಹ್ನದ ಬಿಸಿಯೂಟ ನಿರ್ವಹಣೆಗೆ ಸಂಬಂಽಸಿದಂತೆ ಓರ್ವರು, ಪೌಷ್ಟಿಕ ಆಹಾರವನ್ನು ಕೆಲ ಫಲಾನುಭವಿಗಳಿಗೆ ನೀಡದೆ ವಿತರಣೆ ಮಾಡಲಾಗಿದೆ ಎಂದು ಪುಸ್ತಕದಲ್ಲಿ ನಮೂದಿಸಿರುವ ಓರ್ವ ಅಂಗನವಾಡಿ ಕಾರ್ಯಕರ್ತೆ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲು ಸೂಚಿಸಲಾಗಿದೆ. ತಮ್ಮ ಶಿಫಾರಸು ಆಧರಿಸಿ ಕಡ್ಡಾಯ ರಜೆಯಂತಹ ಕ್ರಮವನ್ನು ಅಽಕಾರಿಗಳು ವಹಿಸಲಿದ್ದಾರೆ ಎಂದು ನಗರದಲ್ಲಿ ಬುಧವಾರ ಅಽಕಾರಿಗಳ ಸಭೆ ನಂತರ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಸುದ್ದಿಗಾರರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಜಿಪಂ ಸಿಇಒ ಮೋನಾ ರೋತ್, ಆಹಾರ ಆಯೋಗದ ಸದಸ್ಯರಾದ ಲಿಂಗರಾಜು ಕೋಟೆ, ಸುಮಂತ್‌ರಾವ್, ಕೆ.ಎಸ್.ವಿಜಯಲಕ್ಷ್ಮಿ, ಎ.ರೋಹಿಣಿಪ್ರಿಯ, ಮಾರುತಿ ದೊಡ್ಡಣ್ಣನವರ್, ಆಹಾರ ಉಪನಿರ್ದೇಶಕರಾದ ವಸುಂಧರಾ ಹೆಗಡೆ, ಇತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

1 hour ago

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

4 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

4 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

5 hours ago

ಮೈಸೂರು ದಸರಾ ಗಜಪಡೆ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಶ್ರೀಕಂಠನಿಗೆ ಮೊದಲ ಸ್ಥಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…

6 hours ago

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

9 hours ago