ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ನಗರ ಸನಿಹದ ಮಲ್ಲಯ್ಯನಪುರ ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತ್ತುಗೊಳಿಸಲು ಹಾಗೂ ವಿವಿಧ ಇಲಾಖೆಗಳ ನಾಲ್ವರು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.
ಮಲ್ಲಯ್ಯನಪುರ ಗ್ರಾಮದ ಕ್ವಾಲಿಟಿ ನ್ಯಾಯಬೆಲೆ ಅಂಗಡಿ ವಿತರಕರಾದ ಮಲ್ಲೇದೇವರು ಅವರು ಆಹಾರ ಪದಾರ್ಥವನ್ನು ಪಡಿತರದಾರರಿಗೆ ಸಮರ್ಪಕವಾಗಿ ವಿತರಣೆ ಮಾಡದಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಚಾರಣೆ ಕಾಯ್ದಿರಿಸಿ ಪರವಾನಗಿಯನ್ನು ಇಲಾಖೆ ಉಪನಿರ್ದೇಶಕರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಲತಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಆದೇಶಿಸಿದ್ದಾರೆ. ಆಯೋಗದ ಶಿಫಾರಸು ಆಧರಿಸಿ ಈ ಕ್ರಮ ವಹಿಸಲಾಗಿದೆ.
ಇದೇ ರೀತಿ, ಆಹಾರ ದಾಸ್ತಾನು ವ್ಯತ್ಯಾಸ, ವಹಿಗಳನ್ನು ನಿರ್ವಹಿಸದಿರುವುದು, ಇನ್ನಿತರ ನ್ಯೂನತೆಗಳ ಕಾರಣದಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಓರ್ವ ಹಾಸ್ಟೆಲ್ ವಾರ್ಡನ್, ಸರ್ಕಾರಿ ಶಾಲೆಯ ಮಧ್ಯಾಹ್ನದ ಬಿಸಿಯೂಟ ನಿರ್ವಹಣೆಗೆ ಸಂಬಂಽಸಿದಂತೆ ಓರ್ವರು, ಪೌಷ್ಟಿಕ ಆಹಾರವನ್ನು ಕೆಲ ಫಲಾನುಭವಿಗಳಿಗೆ ನೀಡದೆ ವಿತರಣೆ ಮಾಡಲಾಗಿದೆ ಎಂದು ಪುಸ್ತಕದಲ್ಲಿ ನಮೂದಿಸಿರುವ ಓರ್ವ ಅಂಗನವಾಡಿ ಕಾರ್ಯಕರ್ತೆ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲು ಸೂಚಿಸಲಾಗಿದೆ. ತಮ್ಮ ಶಿಫಾರಸು ಆಧರಿಸಿ ಕಡ್ಡಾಯ ರಜೆಯಂತಹ ಕ್ರಮವನ್ನು ಅಽಕಾರಿಗಳು ವಹಿಸಲಿದ್ದಾರೆ ಎಂದು ನಗರದಲ್ಲಿ ಬುಧವಾರ ಅಽಕಾರಿಗಳ ಸಭೆ ನಂತರ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಸುದ್ದಿಗಾರರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಜಿಪಂ ಸಿಇಒ ಮೋನಾ ರೋತ್, ಆಹಾರ ಆಯೋಗದ ಸದಸ್ಯರಾದ ಲಿಂಗರಾಜು ಕೋಟೆ, ಸುಮಂತ್ರಾವ್, ಕೆ.ಎಸ್.ವಿಜಯಲಕ್ಷ್ಮಿ, ಎ.ರೋಹಿಣಿಪ್ರಿಯ, ಮಾರುತಿ ದೊಡ್ಡಣ್ಣನವರ್, ಆಹಾರ ಉಪನಿರ್ದೇಶಕರಾದ ವಸುಂಧರಾ ಹೆಗಡೆ, ಇತರರು ಹಾಜರಿದ್ದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…