ಚಾಮರಾಜನಗರ

ಲೋಕಸಭೆ : ಮತದಾನಕ್ಕೆ ಸಕಲ ಸಿದ್ಧತೆ !

  • ಕ್ಷೇತ್ರದಲ್ಲಿ ಒಟ್ಟು ೧೭,೭೮,೩೧೦ ಮತದಾರರು : ೨ ಸಾವಿರ ಮತಗಟ್ಟೆಗಳ ಸ್ಥಾಪನೆ.

ಚಾಮರಾಜನಗರ: ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಏ.೨೬ ರಂದು ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆ ತನಕ ಮತದಾನ ನಡೆಯಲಿದ್ದು, ಚುನಾವಣೆ ಆಯೋಗ ಮತ್ತು ವಿವಿಧ ಇಲಾಖೆಗಳ ಸಮನ್ವತೆಯೊಂದಿಗೆ ಜಿಲ್ಲಾಡಳಿತವು ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ೧೭,೭೮,೩೧೦ ಮತದಾರರಿದ್ದಾರೆ. ಇವರಲ್ಲಿ ೮,೭೮,೭೦೨ ಪುರುಷ, ೮,೯೯,೫೦೧ ಮಹಿಳಾ ಮತದಾರರು. ೧೦೭ ಇತರೆ ಹಾಗೂ ೩೫೭ ಸೇವಾ ಮತದಾರರಿದ್ದಾರೆ. ಇವರಲ್ಲಿ ೩೪೪ ಪುರುಷ ಮತ್ತು ೧೩ ಮಹಿಳಾ ಮತದಾರರು. ಕ್ಷೇತ್ರದಲ್ಲಿ ಒಟ್ಟು ೧೪ ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದಾರೆ. ಇವರಲ್ಲಿ ೧೩ ಪುರುಷರು ಮತ್ತು ಒಬ್ಬ ಮಹಿಳಾ ಅಭ್ಯರ್ಥಿಯಾಗಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ಷೇತ್ರಾದ್ಯಂತ ಒಟ್ಟು ೨ ಸಾವಿರ ಮತಗಟ್ಟೆಗಳನ್ನು ತೆರೆಯಲಾಗುತ್ತದೆ. ನಗರ ಪ್ರದೇಶದಲ್ಲಿ ೨೬೩ ಮತ್ತು ಗ್ರಾಮೀಣ ಪ್ರದೇಶದಲ್ಲಿ ೧,೭೩೭ ಮತಗಟ್ಟೆಗಳು ಇರಲಿವೆ. ಮಹಿಳೆಯರು ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಜಿಲ್ಲೆಯ ೪ ಕ್ಷೇತ್ರಗಳಲ್ಲಿ ಒಟ್ಟು ೧೬ ಸಖಿ ಮತಗಟ್ಟೆ ಸ್ಥಾಪಿಸಲಾಗುತ್ತದೆ ಎಂದರು.

ಇದಲ್ಲದೆ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದಲ್ಲಿ ೨ ಸಾಂಪ್ರದಾಯಿಕ ಬುಡಕಟ್ಟು ಮತಗಟ್ಟೆ, ವಿಶೇಷ ಚೇತನರಿಗೆ ೪ ಕ್ಷೇತ್ರಗಳಲ್ಲಿ ತಲಾ ಒಂದೊಂದು ಮತಗಟ್ಟೆ ಪ್ರಾರಂಭಿಸಲಾಗುತ್ತದೆ. ಜೊತೆಗೆ ನಾಲ್ವರು ಭಾಷಾ ಅನುವಾದಕರನ್ನು ನೇಮಿಸಲಾಗಿದೆ ಎಂದರು.

ಜಿಲ್ಲೆಯ ೪ ಕ್ಷೇತ್ರಗಳಲ್ಲಿ ಯುವ ಮತದಾರರು ಹೆಚ್ಚಾಗಿರುವ ಪ್ರದೇಶಗಳನ್ನು ಗುರುತಿಸಿ ತಲಾ ೨ ಯುವ ಸೌರಭ ಮತಗಟ್ಟೆಗಳನ್ನು ತೆರೆಯಲಾಗಿದೆ. ಸಾಂಸ್ಕೃತಿಕ ಕಲೆಗಳ ಮಹತ್ವ ತಿಳಿಸಲು ೨ ಪಾರಂಪರಿಕ ಮತಗಟ್ಟೆ ಸ್ಥಾಪಿಸಲಾಗುತ್ತದೆ ಎಂದರು.

ಇದಲ್ಲದೆ ರೈತರ ಮಹತ್ವ ಸಾರುವ ೮ ಅನ್ನದಾತ ಮತಗಟ್ಟೆ, ಅರಣ್ಯದ ಮಹತ್ವ ಹೇಳುವ ೬ ಹಸಿರು ಮತಗಟ್ಟೆಗಳನ್ನು ಆರಂಭಿಸಲಾಗುತ್ತದೆ. ಕ್ಷೇತ್ರಾದ್ಯಂತ ೨ ಸಾವಿರ ಬ್ಯಾಲೆಟ್ ಯೂನಿಟ್, ೨ ಸಾವಿರ ಕಂಟ್ರೋಲ್ ಯೂನಿಟ್, ೨ ಸಾವಿರ ವಿ.ವಿ.ಪ್ಯಾಟ್‌ಗಳನ್ನು ಬಳಸಲಾಗುವುದು ಎಂದು ವಿವರಿಸಿದರು.

ಮತದಾರರ ಸಹಾಯವಾಣಿ ೧೯೫೦ಕ್ಕೆ ಏ.೨೧ರವರೆಗೆ ಮತದಾರರ ಪಟ್ಟಿ, ಭಾವಚಿತ್ರವಿರುವ ಗುರುತಿನ ಚೀಟಿ ಸಂಬಂಧ ೩೮೩ ಕರೆಗಳು ಬಂದಿದ್ದವು. ಇವುಗಳಲ್ಲಿ ೧೦ ದೂರುಗಳು ಮಾತ್ರ ಬಾಕಿಯಿದ್ದು ಉಳಿದವನ್ನು ಇತ್ಯರ್ಥ ಮಾಡಲಾಗಿದೆ. ಸಿವಿಜಿಲ್ ಮೊಬೈಲ್ ಆಪ್‌ಗೆ ಏ.೨೧ ರವರೆಗೆ ೧೦೨೭ ದೂರುಗಳು ಬಂದಿದ್ದವು. ೬೯೫ ಅನ್ನು ಪರಿಹರಿಸಲಾಗಿದೆ ಎಂದರು.

ಬಂದೋಬಸ್ತ್‌ಗೆ ೧೬೬೭ ಪೊಲೀಸರು: ಜಿಲ್ಲೆಯಲ್ಲಿರುವ ೯೮೩ ಮತಗಟ್ಟೆಗಳ ಪೈಕಿ ೧೯೭ ಅನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಮತದಾನವನ್ನು ನ್ಯಾಯಯುತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾದ್ಯಂತ ಒಟ್ಟು ೧,೬೬೭ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.

ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್ಪಿ ಪದ್ಮಿನಿ ಸಾಹು, ಎಡಿಸಿ ಗೀತಾ ಹುಡೇದ ಹಾಜರಿದ್ದರು.

ಏ.೨೫ರಂದು ಕ್ಷೇತ್ರದ ಪಟ್ಟಣಗಳಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕಾರ್ಯ ನಡೆಯಲಿದೆ. ಜೂನ್ ೪ ರಂದು ಬೆಳಿಗ್ಗೆ ೮ ರಿಂದ ಚಾ.ನಗರದ ಹೊರವಲುಂದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

    – ಸಿ.ಟಿ.ಶಿಲ್ಪಾ ನಾಗ್

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago