ಚಾಮರಾಜನಗರ

ಲೋಕಸಭೆ : ಮತದಾನಕ್ಕೆ ಸಕಲ ಸಿದ್ಧತೆ !

  • ಕ್ಷೇತ್ರದಲ್ಲಿ ಒಟ್ಟು ೧೭,೭೮,೩೧೦ ಮತದಾರರು : ೨ ಸಾವಿರ ಮತಗಟ್ಟೆಗಳ ಸ್ಥಾಪನೆ.

ಚಾಮರಾಜನಗರ: ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಏ.೨೬ ರಂದು ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆ ತನಕ ಮತದಾನ ನಡೆಯಲಿದ್ದು, ಚುನಾವಣೆ ಆಯೋಗ ಮತ್ತು ವಿವಿಧ ಇಲಾಖೆಗಳ ಸಮನ್ವತೆಯೊಂದಿಗೆ ಜಿಲ್ಲಾಡಳಿತವು ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ೧೭,೭೮,೩೧೦ ಮತದಾರರಿದ್ದಾರೆ. ಇವರಲ್ಲಿ ೮,೭೮,೭೦೨ ಪುರುಷ, ೮,೯೯,೫೦೧ ಮಹಿಳಾ ಮತದಾರರು. ೧೦೭ ಇತರೆ ಹಾಗೂ ೩೫೭ ಸೇವಾ ಮತದಾರರಿದ್ದಾರೆ. ಇವರಲ್ಲಿ ೩೪೪ ಪುರುಷ ಮತ್ತು ೧೩ ಮಹಿಳಾ ಮತದಾರರು. ಕ್ಷೇತ್ರದಲ್ಲಿ ಒಟ್ಟು ೧೪ ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದಾರೆ. ಇವರಲ್ಲಿ ೧೩ ಪುರುಷರು ಮತ್ತು ಒಬ್ಬ ಮಹಿಳಾ ಅಭ್ಯರ್ಥಿಯಾಗಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ಷೇತ್ರಾದ್ಯಂತ ಒಟ್ಟು ೨ ಸಾವಿರ ಮತಗಟ್ಟೆಗಳನ್ನು ತೆರೆಯಲಾಗುತ್ತದೆ. ನಗರ ಪ್ರದೇಶದಲ್ಲಿ ೨೬೩ ಮತ್ತು ಗ್ರಾಮೀಣ ಪ್ರದೇಶದಲ್ಲಿ ೧,೭೩೭ ಮತಗಟ್ಟೆಗಳು ಇರಲಿವೆ. ಮಹಿಳೆಯರು ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಜಿಲ್ಲೆಯ ೪ ಕ್ಷೇತ್ರಗಳಲ್ಲಿ ಒಟ್ಟು ೧೬ ಸಖಿ ಮತಗಟ್ಟೆ ಸ್ಥಾಪಿಸಲಾಗುತ್ತದೆ ಎಂದರು.

ಇದಲ್ಲದೆ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದಲ್ಲಿ ೨ ಸಾಂಪ್ರದಾಯಿಕ ಬುಡಕಟ್ಟು ಮತಗಟ್ಟೆ, ವಿಶೇಷ ಚೇತನರಿಗೆ ೪ ಕ್ಷೇತ್ರಗಳಲ್ಲಿ ತಲಾ ಒಂದೊಂದು ಮತಗಟ್ಟೆ ಪ್ರಾರಂಭಿಸಲಾಗುತ್ತದೆ. ಜೊತೆಗೆ ನಾಲ್ವರು ಭಾಷಾ ಅನುವಾದಕರನ್ನು ನೇಮಿಸಲಾಗಿದೆ ಎಂದರು.

ಜಿಲ್ಲೆಯ ೪ ಕ್ಷೇತ್ರಗಳಲ್ಲಿ ಯುವ ಮತದಾರರು ಹೆಚ್ಚಾಗಿರುವ ಪ್ರದೇಶಗಳನ್ನು ಗುರುತಿಸಿ ತಲಾ ೨ ಯುವ ಸೌರಭ ಮತಗಟ್ಟೆಗಳನ್ನು ತೆರೆಯಲಾಗಿದೆ. ಸಾಂಸ್ಕೃತಿಕ ಕಲೆಗಳ ಮಹತ್ವ ತಿಳಿಸಲು ೨ ಪಾರಂಪರಿಕ ಮತಗಟ್ಟೆ ಸ್ಥಾಪಿಸಲಾಗುತ್ತದೆ ಎಂದರು.

ಇದಲ್ಲದೆ ರೈತರ ಮಹತ್ವ ಸಾರುವ ೮ ಅನ್ನದಾತ ಮತಗಟ್ಟೆ, ಅರಣ್ಯದ ಮಹತ್ವ ಹೇಳುವ ೬ ಹಸಿರು ಮತಗಟ್ಟೆಗಳನ್ನು ಆರಂಭಿಸಲಾಗುತ್ತದೆ. ಕ್ಷೇತ್ರಾದ್ಯಂತ ೨ ಸಾವಿರ ಬ್ಯಾಲೆಟ್ ಯೂನಿಟ್, ೨ ಸಾವಿರ ಕಂಟ್ರೋಲ್ ಯೂನಿಟ್, ೨ ಸಾವಿರ ವಿ.ವಿ.ಪ್ಯಾಟ್‌ಗಳನ್ನು ಬಳಸಲಾಗುವುದು ಎಂದು ವಿವರಿಸಿದರು.

ಮತದಾರರ ಸಹಾಯವಾಣಿ ೧೯೫೦ಕ್ಕೆ ಏ.೨೧ರವರೆಗೆ ಮತದಾರರ ಪಟ್ಟಿ, ಭಾವಚಿತ್ರವಿರುವ ಗುರುತಿನ ಚೀಟಿ ಸಂಬಂಧ ೩೮೩ ಕರೆಗಳು ಬಂದಿದ್ದವು. ಇವುಗಳಲ್ಲಿ ೧೦ ದೂರುಗಳು ಮಾತ್ರ ಬಾಕಿಯಿದ್ದು ಉಳಿದವನ್ನು ಇತ್ಯರ್ಥ ಮಾಡಲಾಗಿದೆ. ಸಿವಿಜಿಲ್ ಮೊಬೈಲ್ ಆಪ್‌ಗೆ ಏ.೨೧ ರವರೆಗೆ ೧೦೨೭ ದೂರುಗಳು ಬಂದಿದ್ದವು. ೬೯೫ ಅನ್ನು ಪರಿಹರಿಸಲಾಗಿದೆ ಎಂದರು.

ಬಂದೋಬಸ್ತ್‌ಗೆ ೧೬೬೭ ಪೊಲೀಸರು: ಜಿಲ್ಲೆಯಲ್ಲಿರುವ ೯೮೩ ಮತಗಟ್ಟೆಗಳ ಪೈಕಿ ೧೯೭ ಅನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಮತದಾನವನ್ನು ನ್ಯಾಯಯುತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾದ್ಯಂತ ಒಟ್ಟು ೧,೬೬೭ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.

ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್ಪಿ ಪದ್ಮಿನಿ ಸಾಹು, ಎಡಿಸಿ ಗೀತಾ ಹುಡೇದ ಹಾಜರಿದ್ದರು.

ಏ.೨೫ರಂದು ಕ್ಷೇತ್ರದ ಪಟ್ಟಣಗಳಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕಾರ್ಯ ನಡೆಯಲಿದೆ. ಜೂನ್ ೪ ರಂದು ಬೆಳಿಗ್ಗೆ ೮ ರಿಂದ ಚಾ.ನಗರದ ಹೊರವಲುಂದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

    – ಸಿ.ಟಿ.ಶಿಲ್ಪಾ ನಾಗ್

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

2 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

2 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

5 hours ago