ಚಾಮರಾಜನಗರ

ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ: ಮರು ಮತದಾನಕ್ಕೆ ದಿನಾಂಕ ನಿಗದಿ

ಚಾಮರಾಜನಗರ: ನಿನ್ನೆ ( ಏಪ್ರಿಲ್‌ 26 ) ರಾಜ್ಯದ ಒಟ್ಟು 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಿತು. ಎಲ್ಲೆಡೆ ಮತದಾನ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಗೆ ಬರುವ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಹಾಕಿದ್ದ ಗ್ರಾಮಸ್ಥರು ಇವಿಎಂ ಧ್ವಂಸ ಮಾಡಿದ್ದರು.

ಮತಗಟ್ಟೆ ಧ್ವಂಸ ಮಾಡಿದ್ದ ಗ್ರಾಮಸ್ಥರು ಕುರ್ಚಿ ಹಾಗೂ ಮೇಜುಗಳನ್ನು ಸಹ ಒಡೆದು ಹಾಕಿದ್ದರು. ಹೀಗೆ ಪರಿಸ್ಥಿರಿ ವಿಕೋಪಕ್ಕೆ ತಿರುಗಿದ್ದನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದರು. ಈ ವೇಳೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಚುನಾವಣಾಧಿಕಾರಿಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದರು.

ಹೀಗೆ ಹಿಂಸೆ ಏರ್ಪಟ್ಟಿದ್ದ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ನಡೆಸಲು ಚುನಾವಣಾಧಾರಿಗಳು ತೀರ್ಮಾನಿಸಿದ್ದಾರೆ. ಏಪ್ರಿಲ್‌ 29ರಂದು ಬೂತ್‌ ಸಂಖ್ಯೆ 146ರಲ್ಲಿ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈಶ್ವರ್‌ ಖಂಡ್ರೆ

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

2 hours ago

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

2 hours ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

4 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

4 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

6 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

6 hours ago