ಚಾಮರಾಜನಗರ: ನಿನ್ನೆ ( ಏಪ್ರಿಲ್ 26 ) ರಾಜ್ಯದ ಒಟ್ಟು 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಿತು. ಎಲ್ಲೆಡೆ ಮತದಾನ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಗೆ ಬರುವ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಹಾಕಿದ್ದ ಗ್ರಾಮಸ್ಥರು ಇವಿಎಂ ಧ್ವಂಸ ಮಾಡಿದ್ದರು.
ಮತಗಟ್ಟೆ ಧ್ವಂಸ ಮಾಡಿದ್ದ ಗ್ರಾಮಸ್ಥರು ಕುರ್ಚಿ ಹಾಗೂ ಮೇಜುಗಳನ್ನು ಸಹ ಒಡೆದು ಹಾಕಿದ್ದರು. ಹೀಗೆ ಪರಿಸ್ಥಿರಿ ವಿಕೋಪಕ್ಕೆ ತಿರುಗಿದ್ದನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಈ ವೇಳೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಚುನಾವಣಾಧಿಕಾರಿಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದರು.
ಹೀಗೆ ಹಿಂಸೆ ಏರ್ಪಟ್ಟಿದ್ದ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ನಡೆಸಲು ಚುನಾವಣಾಧಾರಿಗಳು ತೀರ್ಮಾನಿಸಿದ್ದಾರೆ. ಏಪ್ರಿಲ್ 29ರಂದು ಬೂತ್ ಸಂಖ್ಯೆ 146ರಲ್ಲಿ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…