ಚಾಮರಾಜನಗರ: ನಿನ್ನೆ ( ಏಪ್ರಿಲ್ 26 ) ರಾಜ್ಯದ ಒಟ್ಟು 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಿತು. ಎಲ್ಲೆಡೆ ಮತದಾನ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಗೆ ಬರುವ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಹಾಕಿದ್ದ ಗ್ರಾಮಸ್ಥರು ಇವಿಎಂ ಧ್ವಂಸ ಮಾಡಿದ್ದರು.
ಮತಗಟ್ಟೆ ಧ್ವಂಸ ಮಾಡಿದ್ದ ಗ್ರಾಮಸ್ಥರು ಕುರ್ಚಿ ಹಾಗೂ ಮೇಜುಗಳನ್ನು ಸಹ ಒಡೆದು ಹಾಕಿದ್ದರು. ಹೀಗೆ ಪರಿಸ್ಥಿರಿ ವಿಕೋಪಕ್ಕೆ ತಿರುಗಿದ್ದನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಈ ವೇಳೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಚುನಾವಣಾಧಿಕಾರಿಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದರು.
ಹೀಗೆ ಹಿಂಸೆ ಏರ್ಪಟ್ಟಿದ್ದ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ನಡೆಸಲು ಚುನಾವಣಾಧಾರಿಗಳು ತೀರ್ಮಾನಿಸಿದ್ದಾರೆ. ಏಪ್ರಿಲ್ 29ರಂದು ಬೂತ್ ಸಂಖ್ಯೆ 146ರಲ್ಲಿ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…