ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್ 3 ) ನಾಮಪತ್ರ ಸಲ್ಲಿಸಿರುವ ಸುನಿಲ್ ಬೋಸ್ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದಾರೆ. ಇಂದು ಭಾರೀ ಗುಂಪಿನ ಜನ ಬೆಂಬಲದೊಂದಿಗೆ ನಾಮಪತ್ರವನ್ನೂ ಸಹ ಸುನಿಲ್ ಬೋಸ್ ಸಲ್ಲಿಸಿದ್ದಾರೆ.
ಒಂದೆಡೆ ಸುನಿಲ್ ಬೋಸ್ ಚುನಾವಣೆ ಸಿದ್ಧತೆಗಳಲ್ಲಿ ತೊಡಗಿ ವಿಜಯಲಕ್ಷ್ಮಿಯನ್ನು ಒಲಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದರೆ, ಮತ್ತೊಂದೆಡೆ ನಗರದ ಬೀದಿ ಬೀದಿಗಳಲ್ಲಿ ʼಗೋ ಬ್ಯಾಕ್ ಸುನಿಲ್ ಬೋಸ್ʼ ಪೋಸ್ಟರ್ಗಳು ರಾರಾಜಿಸಿವೆ. ಹೌದು, ʼಮರಳು ಮಾಫಿಯಾ ದೊರೆಗೆ ಮರುಳು ಆಗ್ಬೇಡಿ, ಗೋಬ್ಯಾಕ್ ಸುನಿಲ್ ಬೋಸ್ʼ ಹಾಗೂ ʼಮರಳು ಮಾಫಿಯಾದ ಅನಭಿಷಿಕ್ತ ದೊರೆʼ ಎಂದು ಸುನಿಲ್ ಬೋಸ್ ಭಾವಚಿತ್ರದ ಮೇಲೆ ʼಎಕ್ಸ್ʼ ಚಿಹ್ನೆ ಬರೆದಿರುವ ಪೋಸ್ಟರ್ಗಳು ಚಾಮರಾಜನಗರದ ಹಲವು ರಸ್ತೆಯ ಗೋಡೆಗಳ ಮೇಲೆ ಕಂಡುಬಂದಿದೆ. ರಾತ್ರೋರಾತ್ರಿ ಈ ಪೋಸ್ಟರ್ಗಳನ್ನು ಅಂಟಿಸಲಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…