ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್ 3 ) ನಾಮಪತ್ರ ಸಲ್ಲಿಸಿರುವ ಸುನಿಲ್ ಬೋಸ್ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದಾರೆ. ಇಂದು ಭಾರೀ ಗುಂಪಿನ ಜನ ಬೆಂಬಲದೊಂದಿಗೆ ನಾಮಪತ್ರವನ್ನೂ ಸಹ ಸುನಿಲ್ ಬೋಸ್ ಸಲ್ಲಿಸಿದ್ದಾರೆ.
ಒಂದೆಡೆ ಸುನಿಲ್ ಬೋಸ್ ಚುನಾವಣೆ ಸಿದ್ಧತೆಗಳಲ್ಲಿ ತೊಡಗಿ ವಿಜಯಲಕ್ಷ್ಮಿಯನ್ನು ಒಲಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದರೆ, ಮತ್ತೊಂದೆಡೆ ನಗರದ ಬೀದಿ ಬೀದಿಗಳಲ್ಲಿ ʼಗೋ ಬ್ಯಾಕ್ ಸುನಿಲ್ ಬೋಸ್ʼ ಪೋಸ್ಟರ್ಗಳು ರಾರಾಜಿಸಿವೆ. ಹೌದು, ʼಮರಳು ಮಾಫಿಯಾ ದೊರೆಗೆ ಮರುಳು ಆಗ್ಬೇಡಿ, ಗೋಬ್ಯಾಕ್ ಸುನಿಲ್ ಬೋಸ್ʼ ಹಾಗೂ ʼಮರಳು ಮಾಫಿಯಾದ ಅನಭಿಷಿಕ್ತ ದೊರೆʼ ಎಂದು ಸುನಿಲ್ ಬೋಸ್ ಭಾವಚಿತ್ರದ ಮೇಲೆ ʼಎಕ್ಸ್ʼ ಚಿಹ್ನೆ ಬರೆದಿರುವ ಪೋಸ್ಟರ್ಗಳು ಚಾಮರಾಜನಗರದ ಹಲವು ರಸ್ತೆಯ ಗೋಡೆಗಳ ಮೇಲೆ ಕಂಡುಬಂದಿದೆ. ರಾತ್ರೋರಾತ್ರಿ ಈ ಪೋಸ್ಟರ್ಗಳನ್ನು ಅಂಟಿಸಲಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…