ಚಾಮರಾಜನಗರ

ಮರಳು ಮಾಫಿಯಾ ದೊರೆಗೆ ಮರುಳು ಆಗ್ಬೇಡಿ; ʼಗೋಬ್ಯಾಕ್‌ ಸುನಿಲ್ ಬೋಸ್‌ʼ ಪೋಸ್ಟರ್‌ ಅಭಿಯಾನ

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ನಾಮಪತ್ರ ಸಲ್ಲಿಸಿರುವ ಸುನಿಲ್ ಬೋಸ್‌ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದಾರೆ. ಇಂದು ಭಾರೀ ಗುಂಪಿನ ಜನ ಬೆಂಬಲದೊಂದಿಗೆ ನಾಮಪತ್ರವನ್ನೂ ಸಹ ಸುನಿಲ್ ಬೋಸ್‌ ಸಲ್ಲಿಸಿದ್ದಾರೆ.

ಒಂದೆಡೆ ಸುನಿಲ್‌ ಬೋಸ್‌ ಚುನಾವಣೆ ಸಿದ್ಧತೆಗಳಲ್ಲಿ ತೊಡಗಿ ವಿಜಯಲಕ್ಷ್ಮಿಯನ್ನು ಒಲಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದರೆ, ಮತ್ತೊಂದೆಡೆ ನಗರದ ಬೀದಿ ಬೀದಿಗಳಲ್ಲಿ ʼಗೋ ಬ್ಯಾಕ್‌ ಸುನಿಲ್‌ ಬೋಸ್‌ʼ ಪೋಸ್ಟರ್‌ಗಳು ರಾರಾಜಿಸಿವೆ. ಹೌದು, ʼಮರಳು ಮಾಫಿಯಾ ದೊರೆಗೆ ಮರುಳು ಆಗ್ಬೇಡಿ, ಗೋಬ್ಯಾಕ್‌ ಸುನಿಲ್‌ ಬೋಸ್‌ʼ ಹಾಗೂ ʼಮರಳು ಮಾಫಿಯಾದ ಅನಭಿಷಿಕ್ತ ದೊರೆʼ ಎಂದು ಸುನಿಲ್‌ ಬೋಸ್‌ ಭಾವಚಿತ್ರದ ಮೇಲೆ ʼಎಕ್ಸ್‌ʼ ಚಿಹ್ನೆ ಬರೆದಿರುವ ಪೋಸ್ಟರ್‌ಗಳು ಚಾಮರಾಜನಗರದ ಹಲವು ರಸ್ತೆಯ ಗೋಡೆಗಳ ಮೇಲೆ ಕಂಡುಬಂದಿದೆ. ರಾತ್ರೋರಾತ್ರಿ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.

andolana

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

8 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago