ಚಾಮರಾಜನಗರ

ನಾನೇನು ಹೊರಗಿನವನಾ? ‘ಗೋಬ್ಯಾಕ್‌’ ಬರೆದವರ ವಿರುದ್ಧ ದೂರು: ಸುನಿಲ್‌ ಬೋಸ್

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ಸುನಿಲ್‌ ಬೋಸ್ ಬೃಹತ್‌ ಹಿಂಬಾಲಕರ ಗುಂಪಿನ ಜತೆ ನಾಮಪತ್ರ ಸಲ್ಲಿಸಿದ್ದಾರೆ.

ಒಂದೆಡೆ ಸುನಿಲ್‌ ಬೋಸ್‌ ಚುನಾವಣೆ ಸಿದ್ಧತೆಗಳಲ್ಲಿ ನಿರತರಾಗಿದ್ದರೆರೆ, ಮತ್ತೊಂದೆಡೆ ನಗರದ ಬೀದಿ ಬೀದಿಗಳಲ್ಲಿ ʼಗೋ ಬ್ಯಾಕ್‌ ಸುನಿಲ್‌ ಬೋಸ್‌ʼ ಪೋಸ್ಟರ್‌ಗಳು ರಾರಾಜಿಸಿವೆ. ಹೌದು, ʼಮರಳು ಮಾಫಿಯಾ ದೊರೆಗೆ ಮರುಳು ಆಗ್ಬೇಡಿ, ಗೋಬ್ಯಾಕ್‌ ಸುನಿಲ್‌ ಬೋಸ್‌ʼ ಎಂದು ಸುನಿಲ್‌ ಬೋಸ್‌ ಭಾವಚಿತ್ರದ ಮೇಲೆ ʼಎಕ್ಸ್‌ʼ ಚಿಹ್ನೆ ಬರೆದಿರುವ ಪೋಸ್ಟರ್‌ಗಳು ಚಾಮರಾಜನಗರದ ಹಲವು ರಸ್ತೆಯ ಗೋಡೆಗಳ ಮೇಲೆ ಕಂಡುಬಂದಿದೆ. ರಾತ್ರೋರಾತ್ರಿ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ಈ ಕುರಿತು ಇಂದು ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಸುನಿಲ್‌ ಬೋಸ್‌ ಮಾತನಾಡಿದ್ದು, ಈ ಕೃತ್ಯ ಎಸಗಿದರ ವಿರುದ್ಧ ದೂರು ನೀಡುತ್ತೇನೆ ಎಂದಿದ್ದಾರೆ. ʼಗೋಬ್ಯಾಕ್‌ ಸುನಿಲ್‌ ಬೋಸ್‌ ಅಂತ ಮಾಡ್ತಾ ಇದ್ದಾರೆ. ನನ್ನ ಮೇಲೆ ಮೊಕದ್ದಮೆ ಏನಿತ್ತೋ ಅದರಲ್ಲಿ ಮಾನ್ಯ ಉಚ್ಛ ನ್ಯಾಯಾಲಯ ನಾನು ನಿರ್ದೋಷಿ ಎಂದು ತೀರ್ಪು ನೀಡಿದೆ. ಮೊದಲಿಂದಲೂ ಹೇಳುತ್ತಿದ್ದೇನೆ. ಬಿಜೆಪಿ ಅವರ ಹತ್ರ ನಮ್ಮನ್ನ ಎದುರಿಸುವ ಶಕ್ತಿ ಇಲ್ಲ. ಹತ್ತು ವರ್ಷದಲ್ಲಿ ಅವರು ಯಾವುದೇ ರೀತಿಯ ಸಾಧನೆಯನ್ನೂ ಮಾಡಿಲ್ಲ. ಜನರಿಗೆ ಯಾವುದೇ ರೀತಿಯ ಯೋಜನೆಯನ್ನೂ ಸಹ ತಂದಿಲ್ಲ. ಅವರು ಕೊನೆಗೆ ಉಪಯೋಗಿಸುವುದೇ ಈ ಅಪಪ್ರಚಾರ ಅಂತ ನಾನು ಮೊದಲಿನೇ ದಿನದಿಂದಲೂ ಹೇಳುತ್ತಾ ಬಂದಿದ್ದೆ. ಅದನ್ನು ಅವರು ಮಾಡಿದ್ದಾರೆ. ಈಗಲೂ ಬಿಜೆಪಿಯವರು ಅದನ್ನು ಸಾಬೀತುಪಡಿಸಿದರೆ ನಾನು ನಾಮಪತ್ರವನ್ನೇ ಸಲ್ಲಿಸುವುದಿಲ್ಲʼ ಎಂದು ಸುನಿಲ್ ಬೋಸ್‌ ಹೇಳಿದರು.

ಅಲ್ಲದೇ ತನಗೆ ಹಿರಿಯರು ಹಾಗೂ ಯುವ ನಾಯಕರ ಬೆಂಬಲವಿದೆ, ಬಿಜೆಪಿಯವರಿಗೆ ಮೋದಿ, ಹಿಂದುತ್ವ ಬಿಟ್ಟು ಬೇರೇನೂ ಇಲ್ಲ. ಹಾಗಾಗಿ ಇಂತಹ ಕೆಲಸ ಮಾಡುತ್ತಿದ್ದಾರೆ. ಇದರ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರನ್ನು ನೀಡುತ್ತೇನೆ ಎಂದೂ ಸಹ ಸುನಿಲ್ ಬೋಸ್‌ ತಿಳಿಸಿದರು.

andolana

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

6 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

7 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

8 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

8 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

8 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

9 hours ago