ಚಾಮರಾಜನಗರ

ನಾನೇನು ಹೊರಗಿನವನಾ? ‘ಗೋಬ್ಯಾಕ್‌’ ಬರೆದವರ ವಿರುದ್ಧ ದೂರು: ಸುನಿಲ್‌ ಬೋಸ್

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ಸುನಿಲ್‌ ಬೋಸ್ ಬೃಹತ್‌ ಹಿಂಬಾಲಕರ ಗುಂಪಿನ ಜತೆ ನಾಮಪತ್ರ ಸಲ್ಲಿಸಿದ್ದಾರೆ.

ಒಂದೆಡೆ ಸುನಿಲ್‌ ಬೋಸ್‌ ಚುನಾವಣೆ ಸಿದ್ಧತೆಗಳಲ್ಲಿ ನಿರತರಾಗಿದ್ದರೆರೆ, ಮತ್ತೊಂದೆಡೆ ನಗರದ ಬೀದಿ ಬೀದಿಗಳಲ್ಲಿ ʼಗೋ ಬ್ಯಾಕ್‌ ಸುನಿಲ್‌ ಬೋಸ್‌ʼ ಪೋಸ್ಟರ್‌ಗಳು ರಾರಾಜಿಸಿವೆ. ಹೌದು, ʼಮರಳು ಮಾಫಿಯಾ ದೊರೆಗೆ ಮರುಳು ಆಗ್ಬೇಡಿ, ಗೋಬ್ಯಾಕ್‌ ಸುನಿಲ್‌ ಬೋಸ್‌ʼ ಎಂದು ಸುನಿಲ್‌ ಬೋಸ್‌ ಭಾವಚಿತ್ರದ ಮೇಲೆ ʼಎಕ್ಸ್‌ʼ ಚಿಹ್ನೆ ಬರೆದಿರುವ ಪೋಸ್ಟರ್‌ಗಳು ಚಾಮರಾಜನಗರದ ಹಲವು ರಸ್ತೆಯ ಗೋಡೆಗಳ ಮೇಲೆ ಕಂಡುಬಂದಿದೆ. ರಾತ್ರೋರಾತ್ರಿ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ಈ ಕುರಿತು ಇಂದು ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಸುನಿಲ್‌ ಬೋಸ್‌ ಮಾತನಾಡಿದ್ದು, ಈ ಕೃತ್ಯ ಎಸಗಿದರ ವಿರುದ್ಧ ದೂರು ನೀಡುತ್ತೇನೆ ಎಂದಿದ್ದಾರೆ. ʼಗೋಬ್ಯಾಕ್‌ ಸುನಿಲ್‌ ಬೋಸ್‌ ಅಂತ ಮಾಡ್ತಾ ಇದ್ದಾರೆ. ನನ್ನ ಮೇಲೆ ಮೊಕದ್ದಮೆ ಏನಿತ್ತೋ ಅದರಲ್ಲಿ ಮಾನ್ಯ ಉಚ್ಛ ನ್ಯಾಯಾಲಯ ನಾನು ನಿರ್ದೋಷಿ ಎಂದು ತೀರ್ಪು ನೀಡಿದೆ. ಮೊದಲಿಂದಲೂ ಹೇಳುತ್ತಿದ್ದೇನೆ. ಬಿಜೆಪಿ ಅವರ ಹತ್ರ ನಮ್ಮನ್ನ ಎದುರಿಸುವ ಶಕ್ತಿ ಇಲ್ಲ. ಹತ್ತು ವರ್ಷದಲ್ಲಿ ಅವರು ಯಾವುದೇ ರೀತಿಯ ಸಾಧನೆಯನ್ನೂ ಮಾಡಿಲ್ಲ. ಜನರಿಗೆ ಯಾವುದೇ ರೀತಿಯ ಯೋಜನೆಯನ್ನೂ ಸಹ ತಂದಿಲ್ಲ. ಅವರು ಕೊನೆಗೆ ಉಪಯೋಗಿಸುವುದೇ ಈ ಅಪಪ್ರಚಾರ ಅಂತ ನಾನು ಮೊದಲಿನೇ ದಿನದಿಂದಲೂ ಹೇಳುತ್ತಾ ಬಂದಿದ್ದೆ. ಅದನ್ನು ಅವರು ಮಾಡಿದ್ದಾರೆ. ಈಗಲೂ ಬಿಜೆಪಿಯವರು ಅದನ್ನು ಸಾಬೀತುಪಡಿಸಿದರೆ ನಾನು ನಾಮಪತ್ರವನ್ನೇ ಸಲ್ಲಿಸುವುದಿಲ್ಲʼ ಎಂದು ಸುನಿಲ್ ಬೋಸ್‌ ಹೇಳಿದರು.

ಅಲ್ಲದೇ ತನಗೆ ಹಿರಿಯರು ಹಾಗೂ ಯುವ ನಾಯಕರ ಬೆಂಬಲವಿದೆ, ಬಿಜೆಪಿಯವರಿಗೆ ಮೋದಿ, ಹಿಂದುತ್ವ ಬಿಟ್ಟು ಬೇರೇನೂ ಇಲ್ಲ. ಹಾಗಾಗಿ ಇಂತಹ ಕೆಲಸ ಮಾಡುತ್ತಿದ್ದಾರೆ. ಇದರ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರನ್ನು ನೀಡುತ್ತೇನೆ ಎಂದೂ ಸಹ ಸುನಿಲ್ ಬೋಸ್‌ ತಿಳಿಸಿದರು.

andolana

Recent Posts

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

2 mins ago

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

35 mins ago

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

59 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

1 hour ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

4 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

4 hours ago