ಚಾಮರಾಜನಗರ

ನಾನೇನು ಹೊರಗಿನವನಾ? ‘ಗೋಬ್ಯಾಕ್‌’ ಬರೆದವರ ವಿರುದ್ಧ ದೂರು: ಸುನಿಲ್‌ ಬೋಸ್

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ಸುನಿಲ್‌ ಬೋಸ್ ಬೃಹತ್‌ ಹಿಂಬಾಲಕರ ಗುಂಪಿನ ಜತೆ ನಾಮಪತ್ರ ಸಲ್ಲಿಸಿದ್ದಾರೆ.

ಒಂದೆಡೆ ಸುನಿಲ್‌ ಬೋಸ್‌ ಚುನಾವಣೆ ಸಿದ್ಧತೆಗಳಲ್ಲಿ ನಿರತರಾಗಿದ್ದರೆರೆ, ಮತ್ತೊಂದೆಡೆ ನಗರದ ಬೀದಿ ಬೀದಿಗಳಲ್ಲಿ ʼಗೋ ಬ್ಯಾಕ್‌ ಸುನಿಲ್‌ ಬೋಸ್‌ʼ ಪೋಸ್ಟರ್‌ಗಳು ರಾರಾಜಿಸಿವೆ. ಹೌದು, ʼಮರಳು ಮಾಫಿಯಾ ದೊರೆಗೆ ಮರುಳು ಆಗ್ಬೇಡಿ, ಗೋಬ್ಯಾಕ್‌ ಸುನಿಲ್‌ ಬೋಸ್‌ʼ ಎಂದು ಸುನಿಲ್‌ ಬೋಸ್‌ ಭಾವಚಿತ್ರದ ಮೇಲೆ ʼಎಕ್ಸ್‌ʼ ಚಿಹ್ನೆ ಬರೆದಿರುವ ಪೋಸ್ಟರ್‌ಗಳು ಚಾಮರಾಜನಗರದ ಹಲವು ರಸ್ತೆಯ ಗೋಡೆಗಳ ಮೇಲೆ ಕಂಡುಬಂದಿದೆ. ರಾತ್ರೋರಾತ್ರಿ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ಈ ಕುರಿತು ಇಂದು ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಸುನಿಲ್‌ ಬೋಸ್‌ ಮಾತನಾಡಿದ್ದು, ಈ ಕೃತ್ಯ ಎಸಗಿದರ ವಿರುದ್ಧ ದೂರು ನೀಡುತ್ತೇನೆ ಎಂದಿದ್ದಾರೆ. ʼಗೋಬ್ಯಾಕ್‌ ಸುನಿಲ್‌ ಬೋಸ್‌ ಅಂತ ಮಾಡ್ತಾ ಇದ್ದಾರೆ. ನನ್ನ ಮೇಲೆ ಮೊಕದ್ದಮೆ ಏನಿತ್ತೋ ಅದರಲ್ಲಿ ಮಾನ್ಯ ಉಚ್ಛ ನ್ಯಾಯಾಲಯ ನಾನು ನಿರ್ದೋಷಿ ಎಂದು ತೀರ್ಪು ನೀಡಿದೆ. ಮೊದಲಿಂದಲೂ ಹೇಳುತ್ತಿದ್ದೇನೆ. ಬಿಜೆಪಿ ಅವರ ಹತ್ರ ನಮ್ಮನ್ನ ಎದುರಿಸುವ ಶಕ್ತಿ ಇಲ್ಲ. ಹತ್ತು ವರ್ಷದಲ್ಲಿ ಅವರು ಯಾವುದೇ ರೀತಿಯ ಸಾಧನೆಯನ್ನೂ ಮಾಡಿಲ್ಲ. ಜನರಿಗೆ ಯಾವುದೇ ರೀತಿಯ ಯೋಜನೆಯನ್ನೂ ಸಹ ತಂದಿಲ್ಲ. ಅವರು ಕೊನೆಗೆ ಉಪಯೋಗಿಸುವುದೇ ಈ ಅಪಪ್ರಚಾರ ಅಂತ ನಾನು ಮೊದಲಿನೇ ದಿನದಿಂದಲೂ ಹೇಳುತ್ತಾ ಬಂದಿದ್ದೆ. ಅದನ್ನು ಅವರು ಮಾಡಿದ್ದಾರೆ. ಈಗಲೂ ಬಿಜೆಪಿಯವರು ಅದನ್ನು ಸಾಬೀತುಪಡಿಸಿದರೆ ನಾನು ನಾಮಪತ್ರವನ್ನೇ ಸಲ್ಲಿಸುವುದಿಲ್ಲʼ ಎಂದು ಸುನಿಲ್ ಬೋಸ್‌ ಹೇಳಿದರು.

ಅಲ್ಲದೇ ತನಗೆ ಹಿರಿಯರು ಹಾಗೂ ಯುವ ನಾಯಕರ ಬೆಂಬಲವಿದೆ, ಬಿಜೆಪಿಯವರಿಗೆ ಮೋದಿ, ಹಿಂದುತ್ವ ಬಿಟ್ಟು ಬೇರೇನೂ ಇಲ್ಲ. ಹಾಗಾಗಿ ಇಂತಹ ಕೆಲಸ ಮಾಡುತ್ತಿದ್ದಾರೆ. ಇದರ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರನ್ನು ನೀಡುತ್ತೇನೆ ಎಂದೂ ಸಹ ಸುನಿಲ್ ಬೋಸ್‌ ತಿಳಿಸಿದರು.

andolana

Recent Posts

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

19 mins ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

1 hour ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

3 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

3 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

4 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

5 hours ago