ಚಾಮರಾಜನಗರ : ಲಾರಿ ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.
ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದೆ. ಇದರಿಂದಾಗಿ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ, ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದಿದ್ದಾನೆ. ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…