ಚಾಮರಾಜನಗರ : ಲಾರಿ ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.
ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದೆ. ಇದರಿಂದಾಗಿ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ, ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದಿದ್ದಾನೆ. ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…