ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ.
ಬೋರೆದೊಡ್ಡಿ ಗ್ರಾಮದ ರಂಗಸ್ವಾಮಿ, ರವಿ, ಮಾದಯ್ಯ ಎಂಬುವರಿಗೆ ಸೇರಿದ ನಾಲ್ಕು ಹಸುಗಳು ಮೃತಪಟ್ಟರೆ, ನಾಗ ಎಂಬುವರಿಗೆ ಸೇರಿದ ಹಸು ಕಾಲು ಮುರಿದಿದೆ.
ಘಟನೆಯ ವಿವರ : ಒಡೆಯರ ಪಾಳ್ಯ ಗ್ರಾಮದಿಂದ ತುಮಕೂರು ನಗರಕ್ಕೆ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೋರೆದೊಡ್ಡಿ ಗ್ರಾಮದ ಸಮೀಪ ಪಲ್ಟಿ ಹೊಡೆದಿದೆ. ಪರಿಣಾಮ ಜಮೀನಿನಲ್ಲಿ ಮೇವು ಮೇಯುತಿದ್ದ ನಾಲ್ಕು ಹಸುಗಳು ಸ್ಥಳದಲ್ಲೇ ಮತ ಪಟ್ಟಿವೆ.
ಪರಿಹಾರ ವಿತರಿಸಿದ ಜನ ಧ್ವನಿ ಬಿ ವೆಂಕಟೇಶ್ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿಕೊಂಡು ಸ್ಥಳದಲ್ಲೇ ನಾಲ್ಕು ಹಸು ಮೃತಪಟ್ಟಿರುವ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಒಬಿಸಿ ಕಾರ್ಯಕಾರಿಣಿ ರಾಜ್ಯ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ತಡರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ರೈತರಿಗೆ ಸಾಂತ್ವನ ತಿಳಿಸಿ ಹಸುಗಳ ಮಾಲೀಕರಿಗೆ ತಲಾ ಐದು ಸಾವಿರ ವೈಯಕ್ತಿಕ ಪರಿಹಾರ ವಿತರಿಸಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…