ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ.
ಬೋರೆದೊಡ್ಡಿ ಗ್ರಾಮದ ರಂಗಸ್ವಾಮಿ, ರವಿ, ಮಾದಯ್ಯ ಎಂಬುವರಿಗೆ ಸೇರಿದ ನಾಲ್ಕು ಹಸುಗಳು ಮೃತಪಟ್ಟರೆ, ನಾಗ ಎಂಬುವರಿಗೆ ಸೇರಿದ ಹಸು ಕಾಲು ಮುರಿದಿದೆ.
ಘಟನೆಯ ವಿವರ : ಒಡೆಯರ ಪಾಳ್ಯ ಗ್ರಾಮದಿಂದ ತುಮಕೂರು ನಗರಕ್ಕೆ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೋರೆದೊಡ್ಡಿ ಗ್ರಾಮದ ಸಮೀಪ ಪಲ್ಟಿ ಹೊಡೆದಿದೆ. ಪರಿಣಾಮ ಜಮೀನಿನಲ್ಲಿ ಮೇವು ಮೇಯುತಿದ್ದ ನಾಲ್ಕು ಹಸುಗಳು ಸ್ಥಳದಲ್ಲೇ ಮತ ಪಟ್ಟಿವೆ.
ಪರಿಹಾರ ವಿತರಿಸಿದ ಜನ ಧ್ವನಿ ಬಿ ವೆಂಕಟೇಶ್ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿಕೊಂಡು ಸ್ಥಳದಲ್ಲೇ ನಾಲ್ಕು ಹಸು ಮೃತಪಟ್ಟಿರುವ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಒಬಿಸಿ ಕಾರ್ಯಕಾರಿಣಿ ರಾಜ್ಯ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ತಡರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ರೈತರಿಗೆ ಸಾಂತ್ವನ ತಿಳಿಸಿ ಹಸುಗಳ ಮಾಲೀಕರಿಗೆ ತಲಾ ಐದು ಸಾವಿರ ವೈಯಕ್ತಿಕ ಪರಿಹಾರ ವಿತರಿಸಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…