ಚಾಮರಾಜನಗರ

ಕೈಕೊಟ್ಟ ಪ್ರೀತಿಸಿದ ಹುಡುಗಿ: ಮನನೊಂದ ಯುವಕ ಆತ್ಮಹತ್ಯೆ

ಚಾಮರಾಜನಗರ : ಪ್ರೀತಿಸಿದ ಹುಡುಗಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.

24 ವರ್ಷದ ಸಂತೋಷ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಸಂತೋಷ್‌ ಹಾಗೂ ಸಾಗಡೆ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆಕೆ ಬೇರೊಬ್ಬ ಯುವಕನಿಗೆ ಮೆಸೇಜ್‌ ಮಾಡುತ್ತಿದ್ದಳು. ಇದನ್ನು ಪ್ರಶ್ನಿಸಿದ ಸಂತೋಷ್‌ನಿಂದ ಯುವತಿ ಕೆಲ ದಿನಗಳಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ.

ಇದರಿಂದ ತೀವ್ರ ಮನನೊಂದಿದ್ದ ಸಂತೋಷ್‌, ನನ್ನ ಸಾವಿಗೆ ಆಕೆಯೇ ಕಾರಣ ಎಂದು ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ವಾಟ್ಸಪ್‌ ಸ್ಟೇಟಸ್‌ಗೆ ಹಾಕಿದ್ದ. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ತೆರಕಣಾಂಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

2 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

2 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

2 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

2 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

2 hours ago