ಚಾಮರಾಜನಗರ

ಕೈಕೊಟ್ಟ ಪ್ರೀತಿಸಿದ ಹುಡುಗಿ: ಮನನೊಂದ ಯುವಕ ಆತ್ಮಹತ್ಯೆ

ಚಾಮರಾಜನಗರ : ಪ್ರೀತಿಸಿದ ಹುಡುಗಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.

24 ವರ್ಷದ ಸಂತೋಷ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಸಂತೋಷ್‌ ಹಾಗೂ ಸಾಗಡೆ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆಕೆ ಬೇರೊಬ್ಬ ಯುವಕನಿಗೆ ಮೆಸೇಜ್‌ ಮಾಡುತ್ತಿದ್ದಳು. ಇದನ್ನು ಪ್ರಶ್ನಿಸಿದ ಸಂತೋಷ್‌ನಿಂದ ಯುವತಿ ಕೆಲ ದಿನಗಳಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ.

ಇದರಿಂದ ತೀವ್ರ ಮನನೊಂದಿದ್ದ ಸಂತೋಷ್‌, ನನ್ನ ಸಾವಿಗೆ ಆಕೆಯೇ ಕಾರಣ ಎಂದು ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ವಾಟ್ಸಪ್‌ ಸ್ಟೇಟಸ್‌ಗೆ ಹಾಕಿದ್ದ. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ತೆರಕಣಾಂಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago