ಚಾಮರಾಜನಗರ

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನೆರೆಯ ತಮಿಳುನಾಡು ಭಾಗದಿಂದ ಸಾವಿರಾರು ಪಾದಯಾತ್ರಿಕರು ಮಾದಪ್ಪನ ದರ್ಶನಕ್ಕಾಗಿ ಹರಕೆ ಹೊತ್ತು ಹೆಜ್ಜೆ ಹಾಕಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಧರ್ಮಪುರಿ ಮೇಟೂರು ಕೊಳತೂರು, ಹೊಸೂರು ಡೆಂಕಣೆಕೋಟೆ, ಅಂಚೆಟ್ಟಿ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದಾರೆ. ಇದಲ್ಲದೆ ಆನೇಕಲ್ ತಾಲೂಕಿನ ಅತ್ತಿಬೆಲೆ ಮಾಯಸಂದ್ರ ತಳಿ ಸರ್ಜಾಪುರ ಜಿಗಣಿ ಹುಣಸನಹಳ್ಳಿ, ಕೊಳಗೊಂಡನಹಳ್ಳಿ, ತಿಂಗಳುವಾಡಿ ಇಗ್ಗಲೂರು ಬನ್ನೇರುಘಟ್ಟ ಮರುಗೋಂದಹಳ್ಳಿ, ತಿರುಪಲ್ಯ ಸೇರಿದಂತೆ ಸುಮಾರು 200 ಕ್ಕೂ ಹೆಚ್ಚು ಗ್ರಾಮಗಳ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ಸಾಗುತ್ತಿದ್ದಾರೆ.

ಪಾದಯತೆಯಲ್ಲಿ ಬರುವಾಗ ಮಹದೇಶ್ವರ ಸ್ವಾಮಿಯ ಕಾವ್ಯಗಳನ್ನು ಆಡುತ್ತ ಸೋಬಾನೆ ಪದಗಳ ಮೂಲಕ ಮಲೆ ಮಹದೇಶ್ವರನನ್ನು ಸ್ಮರಿಸುತ್ತಾ ಸಾಗುವ ಭಕ್ತಾದಿಗಳ ದೃಶ್ಯ ಮನಮೋಹಕವಾಗಿದೆ. ತಮ್ಮ ಹರಕೆಗಳನ್ನು ತೀರಿಸಲು ನೂರಾರು ಕಿಲೋಮೀಟರ್ಗಳಷ್ಟು ದೂರ ಬರಿಗಾಲಿನಲ್ಲಿ ನಡೆಯುತ್ತಿರುವುದು ಅವರ ಅಚಲ ಭಕ್ತಿಗೆ ಸಾಕ್ಷಿಯಾಗಿದೆ.

ಯುಗಾದಿ ಜಾತ್ರಾ ಮಹೋತ್ಸವ 16 ರಿಂದ ಪ್ರಾರಂಭವಾಗಲಿದೆ ಮಾರ್ಚ್ 17 ರ ಸಂಜೆ 6:20 ರಿಂದ ರಾತ್ರಿ 8:30 ರವರೆಗೆ ಸ್ವಾಮಿಗೆ ಭಕ್ತಿಯ ‘ಎಣ್ಣೆಮಜ್ಜನ’ ಸೇವೆ ನಡೆಯಲಿದೆ. ಮಾರ್ಚ್ 18 & 19 ಫಾಲ್ಗುಣ ಮಾಸದ ಕೊನೆಯ ದಿನವಾದ ಅಮಾವಾಸ್ಯೆಯ ವಿಶೇಷ ಪೂಜೆಗಳು ಮತ್ತು ಉತ್ಸವಗಳು ಜರುಗಲಿವೆ. ಮಾರ್ಚ್ 19 (ಯುಗಾದಿ) ಬೆಳಿಗ್ಗೆ 3:00 ಗಂಟೆಗೆ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಬೆಳಿಗ್ಗೆ 9:45 ರಿಂದ 11:00 ಗಂಟೆಯ ಶುಭ ಮುಹೂರ್ತದಲ್ಲಿ ‘ಮಹಾರಥೋತ್ಸವ’ ವಿಜೃಂಭಣೆಯಿಂದ ನೆರವೇರಲಿದೆ. ನಂತರ ಗುರುಬ್ರಹ್ಮೋತ್ಸವ, ಅನ್ನಬ್ರಹ್ಮೋತ್ಸವ ಮತ್ತು ಭಕ್ತರಿಗೆ ಬೇವು-ಬೆಲ್ಲದ ಪ್ರಸಾದ ವಿನಿಯೋಗ ನಡೆಯಲಿದೆ.

ಈ ಬಾರಿಯ ವಿಶೇಷ ಅಮಾವಾಸ್ಯೆ ಮತ್ತು ಯುಗಾದಿ ಸಂಗಮ
ಈ ವರ್ಷದ ಯುಗಾದಿಯ ಮತ್ತೊಂದು ವಿಶೇಷವೆಂದರೆ ಫಾಲ್ಗುಣದ ಅಮಾವಾಸ್ಯೆ ಮತ್ತು ಚೈತ್ರದ ಪಾಡ್ಯಮಿ ಹತ್ತಿರವಾಗಿರುವುದು. ಅಮಾವಾಸ್ಯೆಯಂದು ಭಕ್ತರು ಪಿತೃ ತರ್ಪಣ ಸಲ್ಲಿಸುತ್ತಾರೆ ಮತ್ತು ಮರುದಿನ ಹೊಸ ವರ್ಷದ ಹಬ್ಬವನ್ನು ಆಚರಿಸುತ್ತಾರೆ. ಯುಗಾದಿಯ ದಿನ ರೈತರು ತಮ್ಮ ಜಮೀನುಗಳಲ್ಲಿ ಗೋಪೂಜೆ ಸಲ್ಲಿಸಿ, ‘ಹೊನ್ನೇರು’ ಕಟ್ಟುವ ಮೂಲಕ ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡುವುದು ಸಂಪ್ರದಾಯ.

ತಮಿಳುನಾಡಿನ ಭಕ್ತರ ಪಾದಯಾತ್ರೆ ಮಾರ್ಗಗಳು

ತಮಿಳುನಾಡಿನ ವಿವಿಧ ಗ್ರಾಮಗಳಿಂದ ಬರುತ್ತಿರುವ ಭಕ್ತಾದಿಗಳು ದಬ್ಬಗೂಳಿ ಬಸವೇಶ್ವರ ಸನ್ನಿಧಾನದಿಂದ ಕಾವೇರಿ ನದಿ ದಾಟಿ ದಂಟಳ್ಳಿ ಹಾಗೂ ಕೌದಳ್ಳಿ ಮೂಲಕ ಶ್ರೀ ಮಲೆ ಮಹದೇಶ್ವರ ಬೆಟ್ಟ ತಲುಪುತ್ತಿದ್ದಾರೆ. ಮತ್ತೊಂದು ಮಾರ್ಗದ ಮೂಲಕ ಹೊಗೇನಕಲ್ ಅಲಂಬಾಡಿ, ಪಾಲಾರ್ ಮಾರ್ಗವಾಗಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.

ಸುಡು ಬಿಸಿಲಿನಲ್ಲಿಯೂ ಆಗಮಿಸುತ್ತಿರುವ ಭಕ್ತಾದಿಗಳು
ಕಳೆದ ಒಂದು ತಿಂಗಳಿನಿಂದ ಬಿಸಿಲಿನ ತಾಪಮಾನ ಹೆಚ್ಚಾಗಿ ನೆರಳಿನಿಂದ ಬಿಸಿಲಿಗೆ ಬರಲು ಸಾಧ್ಯವಾಗುತ್ತಿಲ್ಲ ಆದರೆ ಸಾವಿರಾರು ಭಕ್ತಾದಿಗಳು ಮಾದಪ್ಪನ ಬೆಟ್ಟಕ್ಕೆ ಬರಿ ಕಾಲಿನಲ್ಲಿ ನಡೆದುಕೊಂಡು ಹೋಗುವುದು ಸಾಮಾನ್ಯದ ಮಾತಲ್ಲ ಇವರಿಗೆ ಮಹದೇಶ್ವರ ಆಶೀರ್ವಾದದಿಂದ ನಡೆದುಕೊಂಡು ಹೋಗುತ್ತಿದ್ದಾರೆ ಎಂದರೆ ತಪ್ಪಾಗಲಾರದು.

ಪ್ರಾಧಿಕಾರದಿಂದ ಅಗತ್ಯ ಸಿದ್ಧತೆ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ನಾಲ್ಕು ದಿನಗಳು ಜಾತ್ರೆ ನಡೆಯುತ್ತಿದ್ದು ಬರುವಂತಹ ಭಕ್ತಾದಿಗಳಿಗೆ ಕುಡಿಯುವ ನೀರು,ದಾಸೋಹ ಪ್ರಸಾದ, ನೆರಳಿನ ವ್ಯವಸ್ಥೆ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ.

ಆತಂಕದಲ್ಲಿ ಪಾದಯಾತ್ರೆ ಮಾಡುತ್ತಿರುವ ಭಕ್ತಾದಿಗಳು
ಕಳೆದ ತಿಂಗಳು ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪಾದಯಾತ್ರಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಆದರೆ ಯುಗಾದಿ ಜಾತ್ರಾ ಮಹೋತ್ಸವಕ್ಕೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ ಮೂಲಕ ತೆರಳುತ್ತಿದ್ದಾರೆ. ಚಿರತೆಯೊಂದು ರಂಗಸ್ವಾಮಿ ಒಡ್ಡು ಹಾಗೂ ಶನಿ ಮಹಾತ್ಮ ದೇವಸ್ಥಾನದ ಸಮೀಪ ಆಗಾಗ ಕಾಣಿಸಿಕೊಳ್ಳುತ್ತಿದ್ದರು ಯಾವುದೇ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಆದರೂ ಭಕ್ತಾದಿಗಳು ಆತಂಕದಲ್ಲಿಯೇ ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದಾರೆ ಒಟ್ಟಾರೆ ಯಾವುದಾದರೂ ಭಕ್ತಾದಿಗಳಿಗೆ ಅನಾಹುತ ಸಂಭವಿಸಿದರೆ ಇದಕ್ಕೆ ಅರಣ್ಯ ಇಲಾಖೆಯವರೇ ನೆರೆ ಹೊಣೆ ಎಂದು ಭಕ್ತಾದಿಗಳು ಆಕ್ರೋಶ ಹೊರ ಹಾಕಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

13 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

14 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

14 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

19 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

20 hours ago