ಚಾಮರಾಜನಗರ

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ 24 ಗಂಟೆ ಅವಧಿಯಲ್ಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದ ಪ್ರವೀಣ್ ಹಾಗೂ ಸ್ನೇಹಿತರು ಪಾದಯಾತ್ರೆಯ ಮೂಲಕ ಜನವರಿ 21ರ ಬುಧವಾರ ಬೆಳಗ್ಗೆ ತಾಳಬೆಟ್ಟದಿಂದ ಪಾದಯಾತ್ರೆ ಹೊರಟಿದ್ದರು. ರಂಗಸ್ವಾಮಿ ಒಡ್ಡಿನ ಸಮೀಪ ಪಾದಯಾತ್ರೆ ತೆರಳುತ್ತಿದ್ದ ಪ್ರವೀಣನ ಮೇಲೆ ಬೃಹತ್ ಗಾತ್ರದ ಚಿರತೆ ದಾಳಿ ನಡೆಸಿ ಅರಣ್ಯಕ್ಕೆ ಎಳೆದೊಯ್ಯುತ್ತಿತ್ತು ಪರಿಣಾಮ ಪ್ರವೀಣ್ ಅರಣ್ಯದಲ್ಲಿ ಮೃತಪಟ್ಟಿದ್ದರು.

ಘಟನೆ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಸೂಚನೆ ನೀಡಿದ್ದರು. ಅವರ ಸೂಚನೆಯಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಹಾಗೂ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

ರಂಗಸ್ವಾಮಿ ಒಡ್ಡಿನ ಸಮೀಪ ಆಗಾಗ ಕಾಣಿಸಿಕೊಳ್ಳುತ್ತಿದ್ದ ಸಮೀಪದಲ್ಲಿ ಚಿರತೆ ಸೆರೆ ಹಿಡಿಯಲು ಎರಡು ಬೋನುಗಳನ್ನು ಇಡಲಾಗಿದ್ದು ಬೋನಿನಲ್ಲಿ ಎರಡು ನಾಯಿಗಳನ್ನು ಸಹ ಕಟ್ಟು ಹಾಕಲಾಗಿತ್ತು. ಜೊತೆಗೆ, ಚಿರತೆ ಕಾರ್ಯಾಪಡೆ, ಕೂಬಿಂಗ್,ಡ್ರೋನ್ ತಂಡ ಸ್ಥಳದಲ್ಲಿಯೇ ಇದ್ದು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಚಿರತೆಯು ರಂಗಸ್ವಾಮಿ ಒಡ್ಡಿನ ಸಮೀಪದಲ್ಲಿಯೇ ಸಂಚರಿಸುತ್ತಿರುವುದನ್ನು ಡ್ರೋನ್ ಕ್ಯಾಮರದಲ್ಲಿ ಪತ್ತೆಹಚ್ಚಿ, ಚಿರತೆಯ ಚಲನ ವಲನದ ಮೇಲೆ ನಿಗಾ ವಹಿಸಲಾಗಿತ್ತು.

ಇದಲ್ಲದೆ ಮಲೆ ಮಾದೇಶ್ವರ ವನ್ಯಜೀವಿಧಾಮದ ಎಸ್ ಎಫ್ ವಿರಾಜ್ ಹೊಸೂರು, ಮಲೆ ಮಹದೇಶ್ವರ ಬೆಟ್ಟ, ರಾಮಪುರ ಹೊಗ್ಯಂ ವಲಯ ಅರಣ್ಯ ಅಧಿಕಾರಿಗಳಾದ ಮಾದೇಶ್, ಜಿತೇಂದ್ರ, ಬಂಡಿಪುರ ಚಾಮರಾಜನಗರ ಮೈಸೂರು ಡ್ರೋನ್ ತಂಡ, ಮೈಸೂರಿನ ಚಿರತೆ ಕಾರ್ಯಪಡೆ, ವೈದ್ಯಾಧಿಕಾರಿಗಳಾದ ಡಾ. ಆದರ್ಶ್ ಹಾಗೂ 50ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳ ನೇತೃತ್ವದಲ್ಲಿ ಹಲವು ಕಡೆ, ಕೂಬಿಂಗ್ ನಡೆಸಲಾಗಿತ್ತು.

ಗುರುವಾರ ಬೆಳಗಿನ ಜಾವ 4:30 ಗಂಟೆಯಲ್ಲಿ ಚಿರತೆ ರಂಗಸ್ವಾಮಿ ಒಡ್ಡಿನ ಸುತ್ತಮುತ್ತಲು ಓಡಾಟ ನಡೆಸುತ್ತಿರುವುದು ಡ್ರೋನ್ ನಲ್ಲಿ ಸೆರೆ ಹಿಡಿಯಲಾಗಿತ್ತು.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಮಾನವ ಪ್ರಾಣಿ ಸಂಘರ್ಷ ನಿರಂತರವಾಗಿ ಹೆಚ್ಚಳವಾಗಿತ್ತು. ಈ ಸಂಬಂಧ ಸಾರ್ವಜನಿಕರು ಹಾಗೂ ರೈತರು ಜಿಲ್ಲೆಯಾದ್ಯಂತ ಹಲವಾರು ಪ್ರತಿಭಟನೆಗಳನ್ನು ನಡೆಸಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಪಾದಯಾತ್ರೆಕಾರಿಗೆ ಸೂಕ್ತ ರಕ್ಷಣೆ ನೀಡಿ ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗದಂತೆ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸೂಕ್ತ ಕ್ರಮ ವಹಿಸಬೇಕು ಎಂದು ತಾಕೀತು ಮಾಡಿದ್ದರು. ಇದಲ್ಲದೆ ಚಿರತೆಯನ್ನು ಅತಿ ಶೀಘ್ರದಲ್ಲಿಯೇ ಸೆರೆ ಹಿಡಿಯಬೇಕೆಂದು ಖಡಕ್ ಸೂಚನೆ ನೀಡಿದ್ದರು.

ಅರಣ್ಯ ಇಲಾಖೆ ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ಮಾಡಿದರು ಚಾಲಾಕಿ ಚಿರತೆ ಬೋನಿಗೆ ಬಿದ್ದಿರಲಿಲ್ಲ, ಗುರುವಾರ ರಾತ್ರಿ ಪಶು ವೈದ್ಯಾಧಿಕಾರಿ ಡಾಕ್ಟರ್ ಆದರ್ಶ್ ರವರು ಅರವಳಿಕೆ ಚುಚ್ಚುಮದ್ದು ನೀಡುವುದರ ಮೂಲಕ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಒಟ್ಟಾರೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ನೇತೃತ್ವದ ತಂಡ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 seconds ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

12 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

24 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago