ಚಾಮರಾಜನಗರ

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ 24 ಗಂಟೆ ಅವಧಿಯಲ್ಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದ ಪ್ರವೀಣ್ ಹಾಗೂ ಸ್ನೇಹಿತರು ಪಾದಯಾತ್ರೆಯ ಮೂಲಕ ಜನವರಿ 21ರ ಬುಧವಾರ ಬೆಳಗ್ಗೆ ತಾಳಬೆಟ್ಟದಿಂದ ಪಾದಯಾತ್ರೆ ಹೊರಟಿದ್ದರು. ರಂಗಸ್ವಾಮಿ ಒಡ್ಡಿನ ಸಮೀಪ ಪಾದಯಾತ್ರೆ ತೆರಳುತ್ತಿದ್ದ ಪ್ರವೀಣನ ಮೇಲೆ ಬೃಹತ್ ಗಾತ್ರದ ಚಿರತೆ ದಾಳಿ ನಡೆಸಿ ಅರಣ್ಯಕ್ಕೆ ಎಳೆದೊಯ್ಯುತ್ತಿತ್ತು ಪರಿಣಾಮ ಪ್ರವೀಣ್ ಅರಣ್ಯದಲ್ಲಿ ಮೃತಪಟ್ಟಿದ್ದರು.

ಘಟನೆ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಸೂಚನೆ ನೀಡಿದ್ದರು. ಅವರ ಸೂಚನೆಯಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಹಾಗೂ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

ರಂಗಸ್ವಾಮಿ ಒಡ್ಡಿನ ಸಮೀಪ ಆಗಾಗ ಕಾಣಿಸಿಕೊಳ್ಳುತ್ತಿದ್ದ ಸಮೀಪದಲ್ಲಿ ಚಿರತೆ ಸೆರೆ ಹಿಡಿಯಲು ಎರಡು ಬೋನುಗಳನ್ನು ಇಡಲಾಗಿದ್ದು ಬೋನಿನಲ್ಲಿ ಎರಡು ನಾಯಿಗಳನ್ನು ಸಹ ಕಟ್ಟು ಹಾಕಲಾಗಿತ್ತು. ಜೊತೆಗೆ, ಚಿರತೆ ಕಾರ್ಯಾಪಡೆ, ಕೂಬಿಂಗ್,ಡ್ರೋನ್ ತಂಡ ಸ್ಥಳದಲ್ಲಿಯೇ ಇದ್ದು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಚಿರತೆಯು ರಂಗಸ್ವಾಮಿ ಒಡ್ಡಿನ ಸಮೀಪದಲ್ಲಿಯೇ ಸಂಚರಿಸುತ್ತಿರುವುದನ್ನು ಡ್ರೋನ್ ಕ್ಯಾಮರದಲ್ಲಿ ಪತ್ತೆಹಚ್ಚಿ, ಚಿರತೆಯ ಚಲನ ವಲನದ ಮೇಲೆ ನಿಗಾ ವಹಿಸಲಾಗಿತ್ತು.

ಇದಲ್ಲದೆ ಮಲೆ ಮಾದೇಶ್ವರ ವನ್ಯಜೀವಿಧಾಮದ ಎಸ್ ಎಫ್ ವಿರಾಜ್ ಹೊಸೂರು, ಮಲೆ ಮಹದೇಶ್ವರ ಬೆಟ್ಟ, ರಾಮಪುರ ಹೊಗ್ಯಂ ವಲಯ ಅರಣ್ಯ ಅಧಿಕಾರಿಗಳಾದ ಮಾದೇಶ್, ಜಿತೇಂದ್ರ, ಬಂಡಿಪುರ ಚಾಮರಾಜನಗರ ಮೈಸೂರು ಡ್ರೋನ್ ತಂಡ, ಮೈಸೂರಿನ ಚಿರತೆ ಕಾರ್ಯಪಡೆ, ವೈದ್ಯಾಧಿಕಾರಿಗಳಾದ ಡಾ. ಆದರ್ಶ್ ಹಾಗೂ 50ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳ ನೇತೃತ್ವದಲ್ಲಿ ಹಲವು ಕಡೆ, ಕೂಬಿಂಗ್ ನಡೆಸಲಾಗಿತ್ತು.

ಗುರುವಾರ ಬೆಳಗಿನ ಜಾವ 4:30 ಗಂಟೆಯಲ್ಲಿ ಚಿರತೆ ರಂಗಸ್ವಾಮಿ ಒಡ್ಡಿನ ಸುತ್ತಮುತ್ತಲು ಓಡಾಟ ನಡೆಸುತ್ತಿರುವುದು ಡ್ರೋನ್ ನಲ್ಲಿ ಸೆರೆ ಹಿಡಿಯಲಾಗಿತ್ತು.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಮಾನವ ಪ್ರಾಣಿ ಸಂಘರ್ಷ ನಿರಂತರವಾಗಿ ಹೆಚ್ಚಳವಾಗಿತ್ತು. ಈ ಸಂಬಂಧ ಸಾರ್ವಜನಿಕರು ಹಾಗೂ ರೈತರು ಜಿಲ್ಲೆಯಾದ್ಯಂತ ಹಲವಾರು ಪ್ರತಿಭಟನೆಗಳನ್ನು ನಡೆಸಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಪಾದಯಾತ್ರೆಕಾರಿಗೆ ಸೂಕ್ತ ರಕ್ಷಣೆ ನೀಡಿ ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗದಂತೆ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸೂಕ್ತ ಕ್ರಮ ವಹಿಸಬೇಕು ಎಂದು ತಾಕೀತು ಮಾಡಿದ್ದರು. ಇದಲ್ಲದೆ ಚಿರತೆಯನ್ನು ಅತಿ ಶೀಘ್ರದಲ್ಲಿಯೇ ಸೆರೆ ಹಿಡಿಯಬೇಕೆಂದು ಖಡಕ್ ಸೂಚನೆ ನೀಡಿದ್ದರು.

ಅರಣ್ಯ ಇಲಾಖೆ ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ಮಾಡಿದರು ಚಾಲಾಕಿ ಚಿರತೆ ಬೋನಿಗೆ ಬಿದ್ದಿರಲಿಲ್ಲ, ಗುರುವಾರ ರಾತ್ರಿ ಪಶು ವೈದ್ಯಾಧಿಕಾರಿ ಡಾಕ್ಟರ್ ಆದರ್ಶ್ ರವರು ಅರವಳಿಕೆ ಚುಚ್ಚುಮದ್ದು ನೀಡುವುದರ ಮೂಲಕ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಒಟ್ಟಾರೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ನೇತೃತ್ವದ ತಂಡ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

20 mins ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

2 hours ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

5 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

5 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

5 hours ago