ಚಾಮರಾಜನಗರ

ಮ.ಬೆಟ್ಟದ ಆದಾಯವನ್ನು ಹಳ್ಳಿಗಳ ಅಭಿವೃದ್ಧಿಗೆ ಬಳಸಿ ; ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರದ ಡಾ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ದೇವಾಲಯಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಬರುತ್ತದೆ. ಅದರಲ್ಲಿ ಸ್ಥಳೀಯ ಗ್ರಾಮಗಳನ್ನು ಅಭಿವೃದ್ಧಿ ಕಲ್ಪಿಸುವ ಬಗ್ಗೆ ತಿದ್ದುಪಡಿ ಮಾಡಬೇಕು. ದಶಕಗಳಿಂದಲೂ ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಸಮರ್ಪಕವಾದ ರಸ್ತೆಗಳಿಲ್ಲದೆ ಸಂಚಾರಕ್ಕೆ ಬಹಳ ತೊಂದರೆ ಉಂಟಾಗುತ್ತಿದೆ. ಅಲ್ಲಿನ ಮಹಿಳೆಯರು ನೀರು ತರಲು ಪ್ರತಿನಿತ್ಯವೂ ಕಾಡಿನ ದುರ್ಗಮ ಹಾದಿಯಲ್ಲಿ ತೆರಳುವುದು ಶೋಚನೀಯ ಎಂದು ವಿಷಾಧಿಸಿದರು.

ರಸ್ತೆ ಸಂಪರ್ಕವಿಲ್ಲದ ಕಾರಣ ಗರ್ಭಿಣಿಯರ ಪ್ರಸವ ಸಂದರ್ಭದಲ್ಲಿ ಬಟ್ಟೆ ಜೋಲಿಯಲ್ಲಿ ಹೊತ್ತುಕೊಂಡು ಆಸ್ಪತ್ರೆ ದಾಖಲಿಸುವ ದಯನೀಯ ಸ್ಥಿತಿ ಎದುರಾಗಿದೆ. ತೀವ್ರ ಅಸ್ವಸ್ಥರಾದ ಹಿರಿಯ ರೋಗಿಗಳೂ ಕೂಡ ಮೈಲುಗಟ್ಟಲೆ ನಡೆದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬೆಟ್ಟದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿರುವ ಜನರೇ ಮಹದೇಶ್ವರ ಸ್ವಾಮಿಯ ನಿಜವಾದ ಭಕ್ತರು. ಅವರು ಕಾಡಿನ ಸಂರಕ್ಷಕರೂ ಅಗಿದ್ದಾರೆ. ದೇವಾಲಯದ ಅಭಿವೃದ್ಧಿಗೆ ಅಡ್ಡಿಯಿಲ್ಲ. ಜೊತೆಗೆ ಅಲ್ಲಿನ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೇವಸ್ಥಾನದ ಸಂಪನ್ಮೂಲವನ್ನು ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.

ಇತ್ತೀಚಿಗೆ ಸರ್ಕಾರವು ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಹಲವಾರು ಅಭಿವೃದ್ಧಿ ಯೋಜನೆ ಘೋಷಣೆ ಮಾಡಿ ಒಳ್ಳೆಯ ಕೆಲಸ ಮಾಡಿದೆ. ದೇವಾಲಯಕ್ಕೆ ಲಕ್ಷಾಂತರ ಜನರು ಭೇಟಿ‌ ನೀಡುತ್ತಾರೆ. ಶಕ್ತಿ ಯೋಜನೆಯಿಂದ ಮಹಿಳೆಯರ ಭೇಟಿ ಹೆಚ್ಚಾಗಿದೆ. ಹೀಗಾಗಿ ಎರಡನೇ ಹಂತದಲ್ಲಿ ಕಾವೇರಿ ನೀರು ತರುವ ಯೋಜನೆಯಿಂದ ಕುಡಿಯುವ ನೀರು ಪೂರೈಸಬೇಕು. ಚುನಾವಣೆ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು ಮೂಲಭೂತ ಸೌಕರ್ಯ ಒತ್ತಾಯಿಸಿ ಮತದಾನ ಬಹಿಸ್ಕರಿದ್ದರು. ಮತಗಟ್ಟೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅವರೆಲ್ಲರ ಮೇಲೆ ಪ್ರಕರಣ ದಾಖಲಿಸಲಾಗಿದೆ. ನೀರು, ವಿದ್ಯುತ್, ಆಶ್ರಯದಿಂದ ವಂಚಿತರಾಗಿರುವ ಜನರ ಸಾಕ್ಷರತೆ ಪ್ರಮಾಣ ಹಾಗೂ ಜನರ ಆರೋಗ್ಯಮಟ್ಟ ಎಷ್ಟಿದೆ ಎಂಬುದನ್ನು ಗಮನಿಸಬೇಕಿದೆ ಎಂದು ಸದನದ ಗಮನಕ್ಕೆ ತರಲಾಯಿತು.

ಇದರ ಜೊತೆಗೆ ಮಲೆಮಹದೇಶ್ವರ ದೇವಾಲಯದಲ್ಲಿ ಹೊರಗುತ್ತಿದೆ ಹಾಗೂ ತಾತ್ಕಾಲಿಕವಾಗಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ಉದ್ಯೋಗಿಗಳನ್ನು ಖಾಯಂಗೊಳಿಸಬೇಕು. ಆ ಮೂಲಕ ಅವರ ಭವಿಷ್ಯ ರೂಪಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

19 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

20 hours ago