ಚಾಮರಾಜನಗರ

ಮ.ಬೆಟ್ಟದ ಆದಾಯವನ್ನು ಹಳ್ಳಿಗಳ ಅಭಿವೃದ್ಧಿಗೆ ಬಳಸಿ ; ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರದ ಡಾ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ದೇವಾಲಯಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಬರುತ್ತದೆ. ಅದರಲ್ಲಿ ಸ್ಥಳೀಯ ಗ್ರಾಮಗಳನ್ನು ಅಭಿವೃದ್ಧಿ ಕಲ್ಪಿಸುವ ಬಗ್ಗೆ ತಿದ್ದುಪಡಿ ಮಾಡಬೇಕು. ದಶಕಗಳಿಂದಲೂ ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಸಮರ್ಪಕವಾದ ರಸ್ತೆಗಳಿಲ್ಲದೆ ಸಂಚಾರಕ್ಕೆ ಬಹಳ ತೊಂದರೆ ಉಂಟಾಗುತ್ತಿದೆ. ಅಲ್ಲಿನ ಮಹಿಳೆಯರು ನೀರು ತರಲು ಪ್ರತಿನಿತ್ಯವೂ ಕಾಡಿನ ದುರ್ಗಮ ಹಾದಿಯಲ್ಲಿ ತೆರಳುವುದು ಶೋಚನೀಯ ಎಂದು ವಿಷಾಧಿಸಿದರು.

ರಸ್ತೆ ಸಂಪರ್ಕವಿಲ್ಲದ ಕಾರಣ ಗರ್ಭಿಣಿಯರ ಪ್ರಸವ ಸಂದರ್ಭದಲ್ಲಿ ಬಟ್ಟೆ ಜೋಲಿಯಲ್ಲಿ ಹೊತ್ತುಕೊಂಡು ಆಸ್ಪತ್ರೆ ದಾಖಲಿಸುವ ದಯನೀಯ ಸ್ಥಿತಿ ಎದುರಾಗಿದೆ. ತೀವ್ರ ಅಸ್ವಸ್ಥರಾದ ಹಿರಿಯ ರೋಗಿಗಳೂ ಕೂಡ ಮೈಲುಗಟ್ಟಲೆ ನಡೆದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬೆಟ್ಟದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿರುವ ಜನರೇ ಮಹದೇಶ್ವರ ಸ್ವಾಮಿಯ ನಿಜವಾದ ಭಕ್ತರು. ಅವರು ಕಾಡಿನ ಸಂರಕ್ಷಕರೂ ಅಗಿದ್ದಾರೆ. ದೇವಾಲಯದ ಅಭಿವೃದ್ಧಿಗೆ ಅಡ್ಡಿಯಿಲ್ಲ. ಜೊತೆಗೆ ಅಲ್ಲಿನ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೇವಸ್ಥಾನದ ಸಂಪನ್ಮೂಲವನ್ನು ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.

ಇತ್ತೀಚಿಗೆ ಸರ್ಕಾರವು ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಹಲವಾರು ಅಭಿವೃದ್ಧಿ ಯೋಜನೆ ಘೋಷಣೆ ಮಾಡಿ ಒಳ್ಳೆಯ ಕೆಲಸ ಮಾಡಿದೆ. ದೇವಾಲಯಕ್ಕೆ ಲಕ್ಷಾಂತರ ಜನರು ಭೇಟಿ‌ ನೀಡುತ್ತಾರೆ. ಶಕ್ತಿ ಯೋಜನೆಯಿಂದ ಮಹಿಳೆಯರ ಭೇಟಿ ಹೆಚ್ಚಾಗಿದೆ. ಹೀಗಾಗಿ ಎರಡನೇ ಹಂತದಲ್ಲಿ ಕಾವೇರಿ ನೀರು ತರುವ ಯೋಜನೆಯಿಂದ ಕುಡಿಯುವ ನೀರು ಪೂರೈಸಬೇಕು. ಚುನಾವಣೆ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು ಮೂಲಭೂತ ಸೌಕರ್ಯ ಒತ್ತಾಯಿಸಿ ಮತದಾನ ಬಹಿಸ್ಕರಿದ್ದರು. ಮತಗಟ್ಟೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅವರೆಲ್ಲರ ಮೇಲೆ ಪ್ರಕರಣ ದಾಖಲಿಸಲಾಗಿದೆ. ನೀರು, ವಿದ್ಯುತ್, ಆಶ್ರಯದಿಂದ ವಂಚಿತರಾಗಿರುವ ಜನರ ಸಾಕ್ಷರತೆ ಪ್ರಮಾಣ ಹಾಗೂ ಜನರ ಆರೋಗ್ಯಮಟ್ಟ ಎಷ್ಟಿದೆ ಎಂಬುದನ್ನು ಗಮನಿಸಬೇಕಿದೆ ಎಂದು ಸದನದ ಗಮನಕ್ಕೆ ತರಲಾಯಿತು.

ಇದರ ಜೊತೆಗೆ ಮಲೆಮಹದೇಶ್ವರ ದೇವಾಲಯದಲ್ಲಿ ಹೊರಗುತ್ತಿದೆ ಹಾಗೂ ತಾತ್ಕಾಲಿಕವಾಗಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ಉದ್ಯೋಗಿಗಳನ್ನು ಖಾಯಂಗೊಳಿಸಬೇಕು. ಆ ಮೂಲಕ ಅವರ ಭವಿಷ್ಯ ರೂಪಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

23 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

23 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

23 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

23 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

23 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago