ಚಾಮರಾಜನಗರ

ಮ.ಬೆಟ್ಟ | ರಸ್ತೆಯಲ್ಲಿ ಮಧ್ಯ ಹೊತ್ತಿ ಉರಿದ ಕಾರು

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ತೆರಳುವಾಗ ಆಕಸ್ಮಿಕವಾಗಿ ಸರ್ಕ್ಯೂಟ್ ನಿಂದ ಕಾರು ಬೆಂಕಿಗೆ ಆಹುತಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲೇಮಾಳ ಸಮೀಪ ನಡೆದಿದೆ.

ಬೆಂಗಳೂರು ಮೂಲದ ಶ್ರೀಧರ್ ಹಾಗೂ ಅವರ ಸ್ನೇಹಿತ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಎಲ್ಲೇಮಾಳ ಗ್ರಾಮದ ಸಮೀಪ (ಕೆ.ಎಂ.-೦೫ ಎಂ.ಜೆ ೯೬೩೭) ಸಂಖ್ಯೆಯ ಇಟಿಯೋಸ್ ಕಾರಿನ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ.

ತಕ್ಷಣ ಕಾರಿನ ಮಾಲೀಕ ಶ್ರೀಧರ್ ಹಾಗೂ ಸ್ನೇಹಿತ ಕಾರಿನಿಂದ ಕೆಳಗಿಳಿದು ಬಾನೆಟ್ ತೆಗೆದಿದ್ದಾರೆ. ಆಗ ಇದ್ದಕ್ಕಿದ್ದಂತೆ ಬೆಂಕಿ ಮತ್ತಷ್ಟು ಆವರಿಸಿಕೊಂಡಿದೆ. ಪೆಟ್ರೋಲ್ ಕಾರ್ ಆಗಿರುವುದರಿಂದ ಹೆಚ್ಚಿನ ಅನಾಹುತ ಸಂಭವಿಸಬಹುದು ಎಂದು ದೂರ ಸರಿದು, ಹನೂರು ಪಟ್ಟಣದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಕಾರು ಬೆಂಕಿಗೆ ಆಹುತಿಯಾಗಿದೆ.

ಪ್ರಭಾರ ಠಾಣಾಧಿಕಾರಿ ಮಹೇಶ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗದವರಾದ ರವಿ, ಆನಂದ್, ಜಯಪ್ರಕಾಶ್, ಅಶೋಕ್, ಬಸವರಾಜು ಘಟನಾ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿ, ಅಕ್ಕಪಕ್ಕ ಬೆಂಕಿ ವ್ಯಾಪಿಸಿ ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.

ಈ ಸಂಬಂಧ ಹನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಲೀಕ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

33 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

38 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

42 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

46 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago