ಚಾಮರಾಜನಗರ

ಮ.ಬೆಟ್ಟ | ರಸ್ತೆಯಲ್ಲಿ ಮಧ್ಯ ಹೊತ್ತಿ ಉರಿದ ಕಾರು

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ತೆರಳುವಾಗ ಆಕಸ್ಮಿಕವಾಗಿ ಸರ್ಕ್ಯೂಟ್ ನಿಂದ ಕಾರು ಬೆಂಕಿಗೆ ಆಹುತಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲೇಮಾಳ ಸಮೀಪ ನಡೆದಿದೆ.

ಬೆಂಗಳೂರು ಮೂಲದ ಶ್ರೀಧರ್ ಹಾಗೂ ಅವರ ಸ್ನೇಹಿತ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಎಲ್ಲೇಮಾಳ ಗ್ರಾಮದ ಸಮೀಪ (ಕೆ.ಎಂ.-೦೫ ಎಂ.ಜೆ ೯೬೩೭) ಸಂಖ್ಯೆಯ ಇಟಿಯೋಸ್ ಕಾರಿನ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ.

ತಕ್ಷಣ ಕಾರಿನ ಮಾಲೀಕ ಶ್ರೀಧರ್ ಹಾಗೂ ಸ್ನೇಹಿತ ಕಾರಿನಿಂದ ಕೆಳಗಿಳಿದು ಬಾನೆಟ್ ತೆಗೆದಿದ್ದಾರೆ. ಆಗ ಇದ್ದಕ್ಕಿದ್ದಂತೆ ಬೆಂಕಿ ಮತ್ತಷ್ಟು ಆವರಿಸಿಕೊಂಡಿದೆ. ಪೆಟ್ರೋಲ್ ಕಾರ್ ಆಗಿರುವುದರಿಂದ ಹೆಚ್ಚಿನ ಅನಾಹುತ ಸಂಭವಿಸಬಹುದು ಎಂದು ದೂರ ಸರಿದು, ಹನೂರು ಪಟ್ಟಣದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಕಾರು ಬೆಂಕಿಗೆ ಆಹುತಿಯಾಗಿದೆ.

ಪ್ರಭಾರ ಠಾಣಾಧಿಕಾರಿ ಮಹೇಶ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗದವರಾದ ರವಿ, ಆನಂದ್, ಜಯಪ್ರಕಾಶ್, ಅಶೋಕ್, ಬಸವರಾಜು ಘಟನಾ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿ, ಅಕ್ಕಪಕ್ಕ ಬೆಂಕಿ ವ್ಯಾಪಿಸಿ ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.

ಈ ಸಂಬಂಧ ಹನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಲೀಕ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

1 hour ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

2 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

2 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

3 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

3 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

4 hours ago