ಚಾಮರಾಜನಗರ

ಮ.ಬೆಟ್ಟ: ಸಿಬ್ಬಂದಿಗಳ ಕರ್ತವ್ಯ ಲೋಪ ಕಂಡು ಬಂದರೆ ಕ್ರಮ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವ ಸಂದರ್ಭಗಳಲ್ಲಿ ಸಿಬ್ಬಂದಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ಲೋಪ ದೋಷ ಕಂಡು ಬಂದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಎಚ್ಚರಿಕೆ ನೀಡಿದರು.

ತಾಲೂಕಿನ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜಯದಶಮಿ ಜಾತ್ರಾ ಸಂಬಂಧಪಟ್ಟ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾನವಮಿ ಆಯುಧ ಪೂಜೆ ವಿಜಯದಶಮಿ, ದೀಪಾವಳಿ ಜಾತ್ರಾ ಮಹೋತ್ಸವ ಸಂಬಂಧ ದಾಸೋಹ, ಲಾಡು ವಿಭಾಗ, ದರ್ಶನದ ವ್ಯವಸ್ಥೆ, ವಿಶೇಷ ದರ್ಶನ ಅತಿಥಿ ಗಣ್ಯರ ಸತ್ಕಾರ, ಶೌಚಾಲಯ ಮೇಲುಸ್ತುವಾರಿ, ಅಂತರಗಂಗೆ, ಕಲ್ಯಾಣಿ, ಸ್ವಚ್ಛತೆ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಸಂಬಂಧಪಟ್ಟ ಸಿಬ್ಬಂದಿಗಳಿಗೆ ಜವಾಬ್ದಾರಿವಹಿಸಲಾಗಿದೆ. ಅಂತಹ ಕೆಲಸ ಕಾರ್ಯಗಳನ್ನು ಪ್ರತಿಯೊಬ್ಬರು ಮಾದಪ್ಪನಿಗೆ ಸೇವೆ ಮಾಡುತ್ತಿದ್ದೇವೆ ಎಂಬ ದೃಷ್ಟಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕು .ಒಂದೊಮ್ಮೆ ಯಾವುದಾದರು ಲೋಪ ಕಂಡು ಬಂದರೆ ಅಂತಹ ಸಿಬ್ಬಂದಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ನೌಕರರಿಗೆ ಪ್ರಾಧಿಕಾರದ ಬೈಲಾದಂತೆ ಮುಂದಿನ ದಿನಗಳಲ್ಲಿ ಆರನೇ ವೇತನ ಶ್ರೇಣಿಯಡಿ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು , ಕೆಲವು ನೌಕರರು ಆರನೇ ವೇತನ ಶ್ರೇಣಿ ಕೊಡಿಸುವುದಾಗಿ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾವ ಸಿಬ್ಬಂದಿಗಳು ಸಹ ಒಂದು ರೂಪಾಯಿ ಹಣವನ್ನು ನೀಡಬಾರದು. ನೀವು ನಿಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡಿದರೆ ನಾನು ನಿಮಗೆ ಖಂಡಿತವಾಗಿಯೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.

ಶ್ರೀ ಕ್ಷೇತ್ರದ ನಾಗಮಲೆ ಭವನ, ಗಿರಿ ದರ್ಶಿನಿ, ಕಾರಯ್ಯ ಬಿಲ್ಲಯ್ಯ ಸೇರಿದಂತೆ ವಸತಿಗೃಹಗಳು ದುರಸ್ತಿಯಾಗಿರುವುದು ಗಮನಕ್ಕೆ ಬಂದಿದ್ದು ಎಲ್ಲವನ್ನು ಸರಿಪಡಿಸಲು ಕ್ರೀಯಾಯೋಜನೆ, ಸಿದ್ಧಪಡಿಸಲಾಗುತ್ತಿದೆ ಜಾತ್ರಾ ಮಹೋತ್ಸವ ಮುಗಿದ ಕೂಡಲೇ ಕಾಮಗಾರಿ ಪ್ರಾರಂಭಿಸಿ ಭಕ್ತಾದಿಗಳಿಗೆ ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಶೌಚಾಲಯ ದುರಸ್ತಿಗೆ ಕ್ರಮ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಕೆಲವು ಶೌಚಾಲಯಗಳು ದುರಸ್ತಿಗೊಂಡಿರುವುದರಿಂದ ವಿಜಯದಶಮಿ ಜಾತ್ರಾ ಮಹೋತ್ಸವ ಪೂರ್ಣಗೊಂಡ ನಂತರ ದೀಪಾವಳಿ ಜಾತ್ರಾ ಮಹೋತ್ಸವದ ಒಳಗೆ ದುರಸ್ತಿ ಪಡಿಸಲು ಈಗಾಗಲೇ ಸಂಬಂಧಪಟ್ಟ ಅಭಿಯಂತರರಿಗೆ ಸೂಚನೆ ನೀಡಲಾಗಿದೆ ಎಂದರು.

ಕುಂದು ಕೊರತೆ ಸಭೆ: ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಗಳು ಪೂರ್ಣಗೊಂಡ ನಂತರ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳ ಕುಂದು ಕೊರತೆ ಸಭೆ ಕರೆಯಲಾಗುವುದು ತಮ್ಮ ಸಮಸ್ಯೆಗಳು ಏನೇ ಇದ್ದರೂ ನೇರವಾಗಿ ತಿಳಿಸಿದರೆ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಕ್ಷೇತ್ರದ ಪಾವಿತ್ರ್ಯತೆಗೆ ಸಹಕರಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ತಂಬಾಕು ಪದಾರ್ಥಗಳು, ಅಕ್ರಮ ಮದ್ಯ, ಮಾಂಸ ಮಾರಾಟ ನಡೆಯುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿದೆ. ಪ್ರಾಧಿಕಾರದ ಸಿಬ್ಬಂದಿಗಳ ಗಮನಕ್ಕೆ ಇದುವರೆಗೂ ಯಾವುದು ಬಂದಿಲ್ಲವಾ ಎಂದು ಪ್ರಶ್ನಿಸಿದರು. ಶ್ರೀ ಕ್ಷೇತ್ರದಲ್ಲಿ ತಂಬಾಕು ಬೀಡಿ, ಸಿಗರೇಟ್ ಪದಾರ್ಥಗಳು, ಮಧ್ಯ ಮಾರಾಟ ಸೇರಿದಂತೆ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬರುವಂತಹ ಘಟನೆಗಳು ಕಂಡು ಬಂದರೆ ನೇರವಾಗಿ ನನಗೆ ತಿಳಿಸಿ ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಚಂದ್ರಶೇಖರ್ ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹಾದೇವಸ್ವಾಮಿ, ನಾಗರಾಜು, ಜನಾರ್ಧನ್ ಸ್ವಾಮಿ ಮಲ್ಲಿಕಾರ್ಜುನ್ ಪಾರುಪತ್ತೆ ದಾರ ಮಹಾಲಿಂಗನ ಕಟ್ಟೆ ಮಹಾದೇವಸ್ವಾಮಿ, ಲಾಡು ವಿಭಾಗದ ಮಹದೇವಸ್ವಾಮಿ, ಮಲ್ಲಿಕಾರ್ಜುನ್ ಶಾಸ್ತ್ರಿ ಕಿರಿಯ ಅಭಿಯಂತರ ಸೆಲ್ವ ಗಣಪತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

37 mins ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

39 mins ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

40 mins ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

43 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

48 mins ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

55 mins ago