ಚಾಮರಾಜನಗರ

ಮ.ಬೆಟ್ಟ: ಸಿಬ್ಬಂದಿಗಳ ಕರ್ತವ್ಯ ಲೋಪ ಕಂಡು ಬಂದರೆ ಕ್ರಮ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವ ಸಂದರ್ಭಗಳಲ್ಲಿ ಸಿಬ್ಬಂದಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ಲೋಪ ದೋಷ ಕಂಡು ಬಂದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಎಚ್ಚರಿಕೆ ನೀಡಿದರು.

ತಾಲೂಕಿನ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜಯದಶಮಿ ಜಾತ್ರಾ ಸಂಬಂಧಪಟ್ಟ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾನವಮಿ ಆಯುಧ ಪೂಜೆ ವಿಜಯದಶಮಿ, ದೀಪಾವಳಿ ಜಾತ್ರಾ ಮಹೋತ್ಸವ ಸಂಬಂಧ ದಾಸೋಹ, ಲಾಡು ವಿಭಾಗ, ದರ್ಶನದ ವ್ಯವಸ್ಥೆ, ವಿಶೇಷ ದರ್ಶನ ಅತಿಥಿ ಗಣ್ಯರ ಸತ್ಕಾರ, ಶೌಚಾಲಯ ಮೇಲುಸ್ತುವಾರಿ, ಅಂತರಗಂಗೆ, ಕಲ್ಯಾಣಿ, ಸ್ವಚ್ಛತೆ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಸಂಬಂಧಪಟ್ಟ ಸಿಬ್ಬಂದಿಗಳಿಗೆ ಜವಾಬ್ದಾರಿವಹಿಸಲಾಗಿದೆ. ಅಂತಹ ಕೆಲಸ ಕಾರ್ಯಗಳನ್ನು ಪ್ರತಿಯೊಬ್ಬರು ಮಾದಪ್ಪನಿಗೆ ಸೇವೆ ಮಾಡುತ್ತಿದ್ದೇವೆ ಎಂಬ ದೃಷ್ಟಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕು .ಒಂದೊಮ್ಮೆ ಯಾವುದಾದರು ಲೋಪ ಕಂಡು ಬಂದರೆ ಅಂತಹ ಸಿಬ್ಬಂದಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ನೌಕರರಿಗೆ ಪ್ರಾಧಿಕಾರದ ಬೈಲಾದಂತೆ ಮುಂದಿನ ದಿನಗಳಲ್ಲಿ ಆರನೇ ವೇತನ ಶ್ರೇಣಿಯಡಿ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು , ಕೆಲವು ನೌಕರರು ಆರನೇ ವೇತನ ಶ್ರೇಣಿ ಕೊಡಿಸುವುದಾಗಿ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾವ ಸಿಬ್ಬಂದಿಗಳು ಸಹ ಒಂದು ರೂಪಾಯಿ ಹಣವನ್ನು ನೀಡಬಾರದು. ನೀವು ನಿಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡಿದರೆ ನಾನು ನಿಮಗೆ ಖಂಡಿತವಾಗಿಯೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.

ಶ್ರೀ ಕ್ಷೇತ್ರದ ನಾಗಮಲೆ ಭವನ, ಗಿರಿ ದರ್ಶಿನಿ, ಕಾರಯ್ಯ ಬಿಲ್ಲಯ್ಯ ಸೇರಿದಂತೆ ವಸತಿಗೃಹಗಳು ದುರಸ್ತಿಯಾಗಿರುವುದು ಗಮನಕ್ಕೆ ಬಂದಿದ್ದು ಎಲ್ಲವನ್ನು ಸರಿಪಡಿಸಲು ಕ್ರೀಯಾಯೋಜನೆ, ಸಿದ್ಧಪಡಿಸಲಾಗುತ್ತಿದೆ ಜಾತ್ರಾ ಮಹೋತ್ಸವ ಮುಗಿದ ಕೂಡಲೇ ಕಾಮಗಾರಿ ಪ್ರಾರಂಭಿಸಿ ಭಕ್ತಾದಿಗಳಿಗೆ ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಶೌಚಾಲಯ ದುರಸ್ತಿಗೆ ಕ್ರಮ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಕೆಲವು ಶೌಚಾಲಯಗಳು ದುರಸ್ತಿಗೊಂಡಿರುವುದರಿಂದ ವಿಜಯದಶಮಿ ಜಾತ್ರಾ ಮಹೋತ್ಸವ ಪೂರ್ಣಗೊಂಡ ನಂತರ ದೀಪಾವಳಿ ಜಾತ್ರಾ ಮಹೋತ್ಸವದ ಒಳಗೆ ದುರಸ್ತಿ ಪಡಿಸಲು ಈಗಾಗಲೇ ಸಂಬಂಧಪಟ್ಟ ಅಭಿಯಂತರರಿಗೆ ಸೂಚನೆ ನೀಡಲಾಗಿದೆ ಎಂದರು.

ಕುಂದು ಕೊರತೆ ಸಭೆ: ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಗಳು ಪೂರ್ಣಗೊಂಡ ನಂತರ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳ ಕುಂದು ಕೊರತೆ ಸಭೆ ಕರೆಯಲಾಗುವುದು ತಮ್ಮ ಸಮಸ್ಯೆಗಳು ಏನೇ ಇದ್ದರೂ ನೇರವಾಗಿ ತಿಳಿಸಿದರೆ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಕ್ಷೇತ್ರದ ಪಾವಿತ್ರ್ಯತೆಗೆ ಸಹಕರಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ತಂಬಾಕು ಪದಾರ್ಥಗಳು, ಅಕ್ರಮ ಮದ್ಯ, ಮಾಂಸ ಮಾರಾಟ ನಡೆಯುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿದೆ. ಪ್ರಾಧಿಕಾರದ ಸಿಬ್ಬಂದಿಗಳ ಗಮನಕ್ಕೆ ಇದುವರೆಗೂ ಯಾವುದು ಬಂದಿಲ್ಲವಾ ಎಂದು ಪ್ರಶ್ನಿಸಿದರು. ಶ್ರೀ ಕ್ಷೇತ್ರದಲ್ಲಿ ತಂಬಾಕು ಬೀಡಿ, ಸಿಗರೇಟ್ ಪದಾರ್ಥಗಳು, ಮಧ್ಯ ಮಾರಾಟ ಸೇರಿದಂತೆ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬರುವಂತಹ ಘಟನೆಗಳು ಕಂಡು ಬಂದರೆ ನೇರವಾಗಿ ನನಗೆ ತಿಳಿಸಿ ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಚಂದ್ರಶೇಖರ್ ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹಾದೇವಸ್ವಾಮಿ, ನಾಗರಾಜು, ಜನಾರ್ಧನ್ ಸ್ವಾಮಿ ಮಲ್ಲಿಕಾರ್ಜುನ್ ಪಾರುಪತ್ತೆ ದಾರ ಮಹಾಲಿಂಗನ ಕಟ್ಟೆ ಮಹಾದೇವಸ್ವಾಮಿ, ಲಾಡು ವಿಭಾಗದ ಮಹದೇವಸ್ವಾಮಿ, ಮಲ್ಲಿಕಾರ್ಜುನ್ ಶಾಸ್ತ್ರಿ ಕಿರಿಯ ಅಭಿಯಂತರ ಸೆಲ್ವ ಗಣಪತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

3 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

13 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

32 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

55 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago