ಚಾಮರಾಜನಗರ

ಮ.ಬೆಟ್ಟ: ಸಿಬ್ಬಂದಿಗಳ ಕರ್ತವ್ಯ ಲೋಪ ಕಂಡು ಬಂದರೆ ಕ್ರಮ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವ ಸಂದರ್ಭಗಳಲ್ಲಿ ಸಿಬ್ಬಂದಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ಲೋಪ ದೋಷ ಕಂಡು ಬಂದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಎಚ್ಚರಿಕೆ ನೀಡಿದರು.

ತಾಲೂಕಿನ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜಯದಶಮಿ ಜಾತ್ರಾ ಸಂಬಂಧಪಟ್ಟ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾನವಮಿ ಆಯುಧ ಪೂಜೆ ವಿಜಯದಶಮಿ, ದೀಪಾವಳಿ ಜಾತ್ರಾ ಮಹೋತ್ಸವ ಸಂಬಂಧ ದಾಸೋಹ, ಲಾಡು ವಿಭಾಗ, ದರ್ಶನದ ವ್ಯವಸ್ಥೆ, ವಿಶೇಷ ದರ್ಶನ ಅತಿಥಿ ಗಣ್ಯರ ಸತ್ಕಾರ, ಶೌಚಾಲಯ ಮೇಲುಸ್ತುವಾರಿ, ಅಂತರಗಂಗೆ, ಕಲ್ಯಾಣಿ, ಸ್ವಚ್ಛತೆ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಸಂಬಂಧಪಟ್ಟ ಸಿಬ್ಬಂದಿಗಳಿಗೆ ಜವಾಬ್ದಾರಿವಹಿಸಲಾಗಿದೆ. ಅಂತಹ ಕೆಲಸ ಕಾರ್ಯಗಳನ್ನು ಪ್ರತಿಯೊಬ್ಬರು ಮಾದಪ್ಪನಿಗೆ ಸೇವೆ ಮಾಡುತ್ತಿದ್ದೇವೆ ಎಂಬ ದೃಷ್ಟಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕು .ಒಂದೊಮ್ಮೆ ಯಾವುದಾದರು ಲೋಪ ಕಂಡು ಬಂದರೆ ಅಂತಹ ಸಿಬ್ಬಂದಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ನೌಕರರಿಗೆ ಪ್ರಾಧಿಕಾರದ ಬೈಲಾದಂತೆ ಮುಂದಿನ ದಿನಗಳಲ್ಲಿ ಆರನೇ ವೇತನ ಶ್ರೇಣಿಯಡಿ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು , ಕೆಲವು ನೌಕರರು ಆರನೇ ವೇತನ ಶ್ರೇಣಿ ಕೊಡಿಸುವುದಾಗಿ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾವ ಸಿಬ್ಬಂದಿಗಳು ಸಹ ಒಂದು ರೂಪಾಯಿ ಹಣವನ್ನು ನೀಡಬಾರದು. ನೀವು ನಿಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡಿದರೆ ನಾನು ನಿಮಗೆ ಖಂಡಿತವಾಗಿಯೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.

ಶ್ರೀ ಕ್ಷೇತ್ರದ ನಾಗಮಲೆ ಭವನ, ಗಿರಿ ದರ್ಶಿನಿ, ಕಾರಯ್ಯ ಬಿಲ್ಲಯ್ಯ ಸೇರಿದಂತೆ ವಸತಿಗೃಹಗಳು ದುರಸ್ತಿಯಾಗಿರುವುದು ಗಮನಕ್ಕೆ ಬಂದಿದ್ದು ಎಲ್ಲವನ್ನು ಸರಿಪಡಿಸಲು ಕ್ರೀಯಾಯೋಜನೆ, ಸಿದ್ಧಪಡಿಸಲಾಗುತ್ತಿದೆ ಜಾತ್ರಾ ಮಹೋತ್ಸವ ಮುಗಿದ ಕೂಡಲೇ ಕಾಮಗಾರಿ ಪ್ರಾರಂಭಿಸಿ ಭಕ್ತಾದಿಗಳಿಗೆ ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಶೌಚಾಲಯ ದುರಸ್ತಿಗೆ ಕ್ರಮ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಕೆಲವು ಶೌಚಾಲಯಗಳು ದುರಸ್ತಿಗೊಂಡಿರುವುದರಿಂದ ವಿಜಯದಶಮಿ ಜಾತ್ರಾ ಮಹೋತ್ಸವ ಪೂರ್ಣಗೊಂಡ ನಂತರ ದೀಪಾವಳಿ ಜಾತ್ರಾ ಮಹೋತ್ಸವದ ಒಳಗೆ ದುರಸ್ತಿ ಪಡಿಸಲು ಈಗಾಗಲೇ ಸಂಬಂಧಪಟ್ಟ ಅಭಿಯಂತರರಿಗೆ ಸೂಚನೆ ನೀಡಲಾಗಿದೆ ಎಂದರು.

ಕುಂದು ಕೊರತೆ ಸಭೆ: ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಗಳು ಪೂರ್ಣಗೊಂಡ ನಂತರ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳ ಕುಂದು ಕೊರತೆ ಸಭೆ ಕರೆಯಲಾಗುವುದು ತಮ್ಮ ಸಮಸ್ಯೆಗಳು ಏನೇ ಇದ್ದರೂ ನೇರವಾಗಿ ತಿಳಿಸಿದರೆ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಕ್ಷೇತ್ರದ ಪಾವಿತ್ರ್ಯತೆಗೆ ಸಹಕರಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ತಂಬಾಕು ಪದಾರ್ಥಗಳು, ಅಕ್ರಮ ಮದ್ಯ, ಮಾಂಸ ಮಾರಾಟ ನಡೆಯುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿದೆ. ಪ್ರಾಧಿಕಾರದ ಸಿಬ್ಬಂದಿಗಳ ಗಮನಕ್ಕೆ ಇದುವರೆಗೂ ಯಾವುದು ಬಂದಿಲ್ಲವಾ ಎಂದು ಪ್ರಶ್ನಿಸಿದರು. ಶ್ರೀ ಕ್ಷೇತ್ರದಲ್ಲಿ ತಂಬಾಕು ಬೀಡಿ, ಸಿಗರೇಟ್ ಪದಾರ್ಥಗಳು, ಮಧ್ಯ ಮಾರಾಟ ಸೇರಿದಂತೆ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬರುವಂತಹ ಘಟನೆಗಳು ಕಂಡು ಬಂದರೆ ನೇರವಾಗಿ ನನಗೆ ತಿಳಿಸಿ ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಚಂದ್ರಶೇಖರ್ ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹಾದೇವಸ್ವಾಮಿ, ನಾಗರಾಜು, ಜನಾರ್ಧನ್ ಸ್ವಾಮಿ ಮಲ್ಲಿಕಾರ್ಜುನ್ ಪಾರುಪತ್ತೆ ದಾರ ಮಹಾಲಿಂಗನ ಕಟ್ಟೆ ಮಹಾದೇವಸ್ವಾಮಿ, ಲಾಡು ವಿಭಾಗದ ಮಹದೇವಸ್ವಾಮಿ, ಮಲ್ಲಿಕಾರ್ಜುನ್ ಶಾಸ್ತ್ರಿ ಕಿರಿಯ ಅಭಿಯಂತರ ಸೆಲ್ವ ಗಣಪತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago