ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹದೇಶ್ವರ ಸ್ವಾಮಿ ಮಹಾರಥೋತ್ಸವವು ಅದ್ದೂರಿಯಾಗಿ ಜರುಗಿತು.
ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆ ಬಳಿಕ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವವನ್ನು ಸಾರ್ವಜನಿಕರು ಭಕ್ತಿಯಿಂದ ಎಳೆದ ಉಘೇ ಉಘೇ ಮಾದಪ್ಪ ಎಂದು ಜೈಕಾರ ಹಾಕಿದರು.
ಮಹಾಶಿವರಾತ್ರಿ ಜಾತ್ರಾ ರಥೋತ್ಸವದ ಪ್ರಯುಕ್ತ ಮಾಯ್ಕಾರ ಮಾದಪ್ಪನಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದ ಬಳಿಕ ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಬಿಳಿ ಆನೆಯ ಮೇಲೆ ಪ್ರತಿಷ್ಠಾಪಿಸಿ ದೇವಾಲಯದ ಒಳಭಾಗದಲ್ಲಿ ಬೇಡಗಂಪಣ ಸಮುದಾಯದ ವಿಧಿ ವಿಧಾನಗಳಲ್ಲಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ನಂತರ ಇಂದು ಬೆಳಿಗ್ಗೆ ಸಾವಿರಾರು ಸಾರ್ವಜನಿಕರು ರಥೋತ್ಸವವನ್ನು ಎಳೆದು, ಹಣ್ಣು ಜವನ ಎಸೆದು ಭಕ್ತಿ ಪರಾಕಾಷ್ಠೆ ಮೆರೆದರು.
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…
ಪಣಜಿ: ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…