ಚಾಮರಾಜನಗರ

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು, ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರು ಪೊರಕೆ ಇಡಿದು ಸ್ವಚ್ಛತೆಯಲ್ಲಿ ಪಾಲ್ಗೊಂಡರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರು ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸನ್ನು ನನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸುವುದೇ ಆಗಿದೆ.

ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್‌ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್‌ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.

ಇನ್ನು ಜಾತ್ರಾ ಮಹೋತ್ಸವದ ಅಂಗವಾಗಿ ಪೌರಕಾರ್ಮಿಕರು ನಿರಂತರವಾಗಿ ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇವಸ್ಥಾನದ ಆವರಣ ಸ್ವಚ್ಛವಾಗಿರಲು ಪೌರಕಾರ್ಮಿಕರ ಶ್ರಮ ಅತ್ಯಂತ ಪ್ರಮುಖವಾಗಿದೆ. ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಬಾರಿಯ ಜಾತ್ರೆಯಂತೆ ಈ ಬಾರಿಯೂ ಅವರ ಜೊತೆಗೆ ಸೇರಿ ಸ್ವಚ್ಛತೆ ಮಾಡಿ ನಾನು ಕೂಡ ಮಾದಪ್ಪನ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

3 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

3 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

3 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

3 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

6 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

6 hours ago