ಚಾಮರಾಜನಗರ

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು, ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರು ಪೊರಕೆ ಇಡಿದು ಸ್ವಚ್ಛತೆಯಲ್ಲಿ ಪಾಲ್ಗೊಂಡರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರು ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸನ್ನು ನನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸುವುದೇ ಆಗಿದೆ.

ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್‌ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್‌ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.

ಇನ್ನು ಜಾತ್ರಾ ಮಹೋತ್ಸವದ ಅಂಗವಾಗಿ ಪೌರಕಾರ್ಮಿಕರು ನಿರಂತರವಾಗಿ ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇವಸ್ಥಾನದ ಆವರಣ ಸ್ವಚ್ಛವಾಗಿರಲು ಪೌರಕಾರ್ಮಿಕರ ಶ್ರಮ ಅತ್ಯಂತ ಪ್ರಮುಖವಾಗಿದೆ. ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಬಾರಿಯ ಜಾತ್ರೆಯಂತೆ ಈ ಬಾರಿಯೂ ಅವರ ಜೊತೆಗೆ ಸೇರಿ ಸ್ವಚ್ಛತೆ ಮಾಡಿ ನಾನು ಕೂಡ ಮಾದಪ್ಪನ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.

 

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

10 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

10 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

12 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

12 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

12 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

13 hours ago