ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವವು ಭಾನುವಾರ ನೂರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಮಲೆ ಮಹದೇಶ್ವರ ಬೆಟ್ಟದ ಗ್ರಾಮ ದೇವತೆ ಕಟ್ಟೆ ಮಾರಮ್ಮನ ಹಬ್ಬದ ಪ್ರಯುಕ್ತ ಜಾತ್ರಾ ಮಹೋತ್ಸವ ಅಂಗವಾಗಿ ಮಾರಮ್ಮ ದೇವಿಗೆ ವಿಶೇಷ ಪೂಜೆ ಕಾರ್ಯಕ್ರಮಗಳು ಬೇಡಗಂಪಣ ಸಮುದಾಯದ ಸಂಪ್ರದಾಯದಂತೆ ನೆರವೇರಿದವು.
ಒನಕೆ ವೇಷ ಧರಿಸಿ ಸಂಭ್ರಮಾಚರಣೆ
ಬೇಡಗಂಪಣ ಸಮುದಾಯದ ಮಕ್ಕಳು, ಹಿರಿಯರು ವಿವಿಧ ವೇಷಭೂಷಣಗಳನ್ನು ಅಲಂಕರಿಸಿ ಒನಕೆ ವೇಷ ಧರಿಸಿ ದೇವಾಲಯದ ಮುಂಭಾಗ ಕುಣಿಯುವುದು ವಾಡಿಕೆ. ಅದರಂತೆ ಮಾರಮ್ಮನ ಹಬ್ಬದ ಜಾತ್ರಾ ಮಹೋತ್ಸವದಲ್ಲಿ ನೋಡುಗರ ಕಣ್ಮನ ಸೆಳೆಯುವಂತೆ ಒನಕೆ ವೇಷಧಾರಿಗಳ ಸಾಂಸ್ಕ ತಿಕ ನೃತ್ಯ ಪ್ರದರ್ಶನ ಭಕ್ತ ಸಮೂಹದ ಗಮನ ಸೆಳೆಯಿತು.
18 ಹಳ್ಳಿಗಳಿಂದಲೂ ಭಕ್ತರು ಭಾಗಿ
ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವದ ಹಬ್ಬಕ್ಕೆ ಮ.ಬೆಟ್ಟದ ತಪ್ಪಲಿನಲ್ಲಿ ಬರುವ ವಿವಿಧ ಗ್ರಾಮಗಳಿಂದ ಬೇಡಗಂಪಣ ಸಮುದಾಯದ ನಿವಾಸಿಗಳು ಆಗಮಿಸಿ, ಸಾಂಪ್ರದಾಯಿಕ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…