ಚಾಮರಾಜನಗರ

ಮಹದೇಶ್ವರ ಬೆಟ್ಟ | ಕಟ್ಟೆ ಮಾರಮ್ಮ ಜಾತ್ರೆ ಸಂಭ್ರಮ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವವು ಭಾನುವಾರ ನೂರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಮಲೆ ಮಹದೇಶ್ವರ ಬೆಟ್ಟದ ಗ್ರಾಮ ದೇವತೆ ಕಟ್ಟೆ ಮಾರಮ್ಮನ ಹಬ್ಬದ ಪ್ರಯುಕ್ತ ಜಾತ್ರಾ ಮಹೋತ್ಸವ ಅಂಗವಾಗಿ ಮಾರಮ್ಮ ದೇವಿಗೆ ವಿಶೇಷ ಪೂಜೆ ಕಾರ್ಯಕ್ರಮಗಳು ಬೇಡಗಂಪಣ ಸಮುದಾಯದ ಸಂಪ್ರದಾಯದಂತೆ ನೆರವೇರಿದವು.

ಒನಕೆ ವೇಷ ಧರಿಸಿ ಸಂಭ್ರಮಾಚರಣೆ

ಬೇಡಗಂಪಣ ಸಮುದಾಯದ ಮಕ್ಕಳು, ಹಿರಿಯರು ವಿವಿಧ ವೇಷಭೂಷಣಗಳನ್ನು ಅಲಂಕರಿಸಿ ಒನಕೆ ವೇಷ ಧರಿಸಿ ದೇವಾಲಯದ ಮುಂಭಾಗ ಕುಣಿಯುವುದು ವಾಡಿಕೆ. ಅದರಂತೆ ಮಾರಮ್ಮನ ಹಬ್ಬದ ಜಾತ್ರಾ ಮಹೋತ್ಸವದಲ್ಲಿ ನೋಡುಗರ ಕಣ್ಮನ ಸೆಳೆಯುವಂತೆ ಒನಕೆ ವೇಷಧಾರಿಗಳ ಸಾಂಸ್ಕ ತಿಕ ನೃತ್ಯ ಪ್ರದರ್ಶನ ಭಕ್ತ ಸಮೂಹದ ಗಮನ ಸೆಳೆಯಿತು.

18 ಹಳ್ಳಿಗಳಿಂದಲೂ ಭಕ್ತರು ಭಾಗಿ

ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವದ ಹಬ್ಬಕ್ಕೆ ಮ.ಬೆಟ್ಟದ ತಪ್ಪಲಿನಲ್ಲಿ ಬರುವ ವಿವಿಧ ಗ್ರಾಮಗಳಿಂದ ಬೇಡಗಂಪಣ ಸಮುದಾಯದ ನಿವಾಸಿಗಳು ಆಗಮಿಸಿ, ಸಾಂಪ್ರದಾಯಿಕ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

6 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

8 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

11 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

14 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

14 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

15 hours ago