ಚಾಮರಾಜನಗರ

ಮಹದೇಶ್ವರಬೆಟ್ಟ ಠಾಣೆ ಮುಖ್ಯಪೇದೆ ಅಮಾನತ್ತು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಲಾರಿ ಚಾಲಕನ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಮುಖ್ಯಪೇದೆಯನ್ನು ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಠಾಣೆ ಮುಖ್ಯಪೇದೆ ಸಿದ್ದರಾಜು ಅಮಾನತ್ತುಗೊಂಡವರು.

ಹನೂರಿನಿಂದ ತಮಿಳುನಾಡಿಗೆ ಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನಿಂದ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಸಿದ್ದರಾಜು ಅವರನ್ನು ಹಣ ಕೊಡುವಂತೆ ಪೀಡಿಸಿದ್ದಾರೆ.

ಈ ವೇಳೆ ಚಾಲಕ ೫೦ ರೂ. ನೀಡಿದ್ದರು. ಆದರೆ ಮುಖ್ಯಪೇದೆ ೨೦೦ ರೂ. ನೀಡಬೇಕು, ಇಲ್ಲದಿದ್ದರೆ ಲಾರಿಯನ್ನು ಬಿಡುವುದಿಲ್ಲ ಎಂದು ಏರುಧ್ವನಿಯಲ್ಲಿ ಮಾತನಾಡಿದ್ದಾರೆ. ಇದನ್ನು ಲಾರಿ ಚಾಲಕ, ಬಂಡಳ್ಳಿ ಮೂಲದ ಸುಲ್ತಾನ್ ಎಂಬುವವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಇದನ್ನು ಗಮನಿಸಿದ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಅವರು, ಸಾರ್ವಜನಿಕರ ಜೊತೆ ಅಸಭ್ಯ ವರ್ತನೆ ಹಾಗೂ ಕರ್ತವ್ಯ ಲೋಪ ಎಸಗಿರುವ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಮುಖ್ಯಪೇದೆ ಸಿದ್ದರಾಜು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಕು ನಾಯಿ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ನಂಜನಗೂಡು: ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ತಾಲ್ಲೂಕಿನ ವೀರೇಗೌಡನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಹನೂರು| ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಮತ್ತೊಂದು ಚಿರತೆ ಸೆರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ಇಂಡಿಗನತ್ತ, ನಾಗಮಲೆ ಗ್ರಾಮಗಳಲ್ಲಿ ಹಲವಾರು…

2 hours ago

ಮೈಸೂರು ಜಿಲ್ಲೆಯಲ್ಲಿ ಶೇ.96 ರಷ್ಟು ಮತದಾರರ ಮ್ಯಾಪಿಂಗ್‌ ಪೂರ್ಣ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

3 hours ago

ಕೆಆರ್‌ಎಸ್‌ನಲ್ಲಿ ನೀರಿನ ಕೊರತೆಯಿಲ್ಲ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ: ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೆಆರ್‌ಎಸ್‌ನಲ್ಲಿ ಸದ್ಯಕ್ಕೆ ನೀರಿನ ಕೊರತೆಯಿಲ್ಲ ಎಂದು ಶಾಸಕ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು…

4 hours ago

ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಲಿದ್ದಾರೆ. ಇದೇ ತಿಂಗಳ ಜೂನ್…

4 hours ago