Mysore
27
few clouds

Social Media

ಗುರುವಾರ, 22 ಜನವರಿ 2026
Light
Dark

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

2.36 crore collected in last 30 days from male mahadeshwara betta

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ ವಿಧಿಸಲಾಗಿದ್ದು, ಪಾದಯಾತ್ರೆ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದ್ದರ ಪರಿಣಾಮ ಈ ನಿರ್ಬಂಧ ಹೇರಲಾಗಿದೆ.

ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎಂಬ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಮಲೇ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳಲು ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳಲು ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಚಿರತೆಯನ್ನ ಸೆರೆ ಹಿಡಿಯ ಬೇಕಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ದಿನಾಂಕ ಜನವರಿ 21ರ ಸಂಜೆ 6 ಗಂಟೆಯಿಂದ ಜನವರಿ 24ರ ಮಧ್ಯರಾತ್ರಿವರೆಗೆ ನಿರ್ಬಂಧಿಸಿದ್ದಾರೆ.

ಈ ನಿಷೇಧಾಜ್ಞೆಯು ಸದರಿ ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಅರಣ್ಯ ಸಿಬ್ಬಂದಿಗಳು ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

Tags:
error: Content is protected !!