ಚಾಮರಾಜನಗರ

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ ವಿಧಿಸಲಾಗಿದ್ದು, ಪಾದಯಾತ್ರೆ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದ್ದರ ಪರಿಣಾಮ ಈ ನಿರ್ಬಂಧ ಹೇರಲಾಗಿದೆ.

ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎಂಬ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಮಲೇ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳಲು ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳಲು ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಚಿರತೆಯನ್ನ ಸೆರೆ ಹಿಡಿಯ ಬೇಕಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ದಿನಾಂಕ ಜನವರಿ 21ರ ಸಂಜೆ 6 ಗಂಟೆಯಿಂದ ಜನವರಿ 24ರ ಮಧ್ಯರಾತ್ರಿವರೆಗೆ ನಿರ್ಬಂಧಿಸಿದ್ದಾರೆ.

ಈ ನಿಷೇಧಾಜ್ಞೆಯು ಸದರಿ ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಅರಣ್ಯ ಸಿಬ್ಬಂದಿಗಳು ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

26 mins ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

59 mins ago

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

2 hours ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

3 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

3 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

4 hours ago