2.36 crore collected in last 30 days from male mahadeshwara betta
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ ವಿಧಿಸಲಾಗಿದ್ದು, ಪಾದಯಾತ್ರೆ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದ್ದರ ಪರಿಣಾಮ ಈ ನಿರ್ಬಂಧ ಹೇರಲಾಗಿದೆ.
ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎಂಬ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಮಲೇ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳಲು ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳಲು ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಚಿರತೆಯನ್ನ ಸೆರೆ ಹಿಡಿಯ ಬೇಕಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ದಿನಾಂಕ ಜನವರಿ 21ರ ಸಂಜೆ 6 ಗಂಟೆಯಿಂದ ಜನವರಿ 24ರ ಮಧ್ಯರಾತ್ರಿವರೆಗೆ ನಿರ್ಬಂಧಿಸಿದ್ದಾರೆ.
ಈ ನಿಷೇಧಾಜ್ಞೆಯು ಸದರಿ ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಅರಣ್ಯ ಸಿಬ್ಬಂದಿಗಳು ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…