ಚಾಮರಾಜನಗರ

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆ ಹಿಡಿಯುವ ಕಾರ್ಯಚರಣೆ ಮುಂದುವರೆದಿದ್ದು ಡ್ರೋನ್ ಕ್ಯಾಮೆರಾದಲ್ಲಿ ಚಿರತೆ ಚಲನ ವಲನದ ನಿಗಾವಹಿಸಲಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದ ಪ್ರವೀಣ್ ಹಾಗೂ ಸ್ನೇಹಿತರು ಪಾದಯಾತ್ರೆಯ ಮೂಲಕ ಜನವರಿ 21ರ ಬುಧವಾರ ಬೆಳಗ್ಗೆ ತಾಳಬೆಟ್ಟದಿಂದ ಪಾದಯಾತ್ರೆ ಹೊರಟಿದ್ದರು. ರಂಗಸ್ವಾಮಿ ಒಡ್ಡಿನ ಸಮೀಪ ಪಾದಯಾತ್ರೆ ತೆರಳುತ್ತಿದ್ದ ಪ್ರವೀಣನ ಮೇಲೆ ಬೃಹತ್ ಗಾತ್ರದ ಚಿರತೆ ದಾಳಿ ನಡೆಸಿ ಅರಣ್ಯಕ್ಕೆ ಎಳೆದೊಯ್ಯುತ್ತಿತ್ತು ಪರಿಣಾಮ ಪ್ರವೀಣ್ ಅರಣ್ಯದಲ್ಲಿ ಮೃತಪಟ್ಟಿದ್ದರು.

ಈ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ ಚಿರತೆಯನ್ನು ಸೆರೆ ಹಿಡಿಯುವಂತೆ ಸೂಚನೆ ನೀಡಿದ್ದರು. ಅವರ ಸೂಚನೆಯಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಹಾಗೂ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

ರಂಗಸ್ವಾಮಿ ಒಡ್ಡಿನ ಸಮೀಪ ಆಗಾಗ ಕಾಣಿಸಿಕೊಳ್ಳುತ್ತಿದ್ದ ಸಮೀಪದಲ್ಲಿ ಚಿರತೆ ಸೆರೆ ಹಿಡಿಯಲು ಎರಡು ಬೋನುಗಳನ್ನು ಇಡಲಾಗಿದ್ದು ಬೋನಿನಲ್ಲಿ ಎರಡು ನಾಯಿಗಳನ್ನು ಸಹ ಕಟ್ಟಲಾಗಿದೆ. ಜೊತೆಗೆ, ಚಿರತೆ ಕಾರ್ಯಾಪಡೆ, ಕೂಬಿಂಗ್,ಡ್ರೋನ್ ತಂಡ ಸ್ಥಳದಲ್ಲಿಯೇ ಇದ್ದು ಚಿರತೆ ಸೆರಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಚಿರತೆಯು ರಂಗಸ್ವಾಮಿ ಒಡ್ಡಿನ ಸಮೀಪದಲ್ಲಿಯೇ ಸಂಚರಿಸುತ್ತಿರುವುದನ್ನು ಡ್ರೋನ್ ಕ್ಯಾಮರದಲ್ಲಿ ಪತ್ತೆಹಚ್ಚಲಾಗಿದ್ದು ಚಿರತೆ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿಯೇ ಸಂಚರಿಸುತ್ತಿದೆ ಎಂದು ಅರಣ್ಯ ಇಲಾಖೆಯ ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಪಾದಯಾತ್ರಿಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿಯಲು ಈಗಾಗಲೇ ಕಾರ್ಯಾಚರಣೆ ಮುಂದುವರಿಸಲಾಗಿದೆ ಡ್ರೋನ್ ಕ್ಯಾಮರದಲ್ಲಿ ಚಿರತೆ ಚಲನವಲನದ ಬಗ್ಗೆ ನಿಗ ವಹಿಸಲಾಗಿದ್ದು ಚಿರತೆ ಇರುವ ಸ್ಥಳವನ್ನು ಖಚಿತಪಡಿಸಿಕೊಳ್ಳಲಾಗಿದೆ. ಅತಿ ಶೀಘ್ರದಲ್ಲಿಯೇ ಚಿರತೆಯನ್ನು ಸೆರೆ ಹಿಡಿಯಲಾಗುವುದು ಎಂದು ಮಲೆ ಮಹದೇಶ್ವರ ವನ್ಯ ಧಾಮ ಡಿಸಿಎಫ್  ಭಾಸ್ಕರ್ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

6 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

7 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

8 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

9 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

9 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

9 hours ago