ಚಾಮರಾಜನಗರ

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆ ಹಿಡಿಯುವ ಕಾರ್ಯಚರಣೆ ಮುಂದುವರೆದಿದ್ದು ಡ್ರೋನ್ ಕ್ಯಾಮೆರಾದಲ್ಲಿ ಚಿರತೆ ಚಲನ ವಲನದ ನಿಗಾವಹಿಸಲಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದ ಪ್ರವೀಣ್ ಹಾಗೂ ಸ್ನೇಹಿತರು ಪಾದಯಾತ್ರೆಯ ಮೂಲಕ ಜನವರಿ 21ರ ಬುಧವಾರ ಬೆಳಗ್ಗೆ ತಾಳಬೆಟ್ಟದಿಂದ ಪಾದಯಾತ್ರೆ ಹೊರಟಿದ್ದರು. ರಂಗಸ್ವಾಮಿ ಒಡ್ಡಿನ ಸಮೀಪ ಪಾದಯಾತ್ರೆ ತೆರಳುತ್ತಿದ್ದ ಪ್ರವೀಣನ ಮೇಲೆ ಬೃಹತ್ ಗಾತ್ರದ ಚಿರತೆ ದಾಳಿ ನಡೆಸಿ ಅರಣ್ಯಕ್ಕೆ ಎಳೆದೊಯ್ಯುತ್ತಿತ್ತು ಪರಿಣಾಮ ಪ್ರವೀಣ್ ಅರಣ್ಯದಲ್ಲಿ ಮೃತಪಟ್ಟಿದ್ದರು.

ಈ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ ಚಿರತೆಯನ್ನು ಸೆರೆ ಹಿಡಿಯುವಂತೆ ಸೂಚನೆ ನೀಡಿದ್ದರು. ಅವರ ಸೂಚನೆಯಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಹಾಗೂ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

ರಂಗಸ್ವಾಮಿ ಒಡ್ಡಿನ ಸಮೀಪ ಆಗಾಗ ಕಾಣಿಸಿಕೊಳ್ಳುತ್ತಿದ್ದ ಸಮೀಪದಲ್ಲಿ ಚಿರತೆ ಸೆರೆ ಹಿಡಿಯಲು ಎರಡು ಬೋನುಗಳನ್ನು ಇಡಲಾಗಿದ್ದು ಬೋನಿನಲ್ಲಿ ಎರಡು ನಾಯಿಗಳನ್ನು ಸಹ ಕಟ್ಟಲಾಗಿದೆ. ಜೊತೆಗೆ, ಚಿರತೆ ಕಾರ್ಯಾಪಡೆ, ಕೂಬಿಂಗ್,ಡ್ರೋನ್ ತಂಡ ಸ್ಥಳದಲ್ಲಿಯೇ ಇದ್ದು ಚಿರತೆ ಸೆರಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಚಿರತೆಯು ರಂಗಸ್ವಾಮಿ ಒಡ್ಡಿನ ಸಮೀಪದಲ್ಲಿಯೇ ಸಂಚರಿಸುತ್ತಿರುವುದನ್ನು ಡ್ರೋನ್ ಕ್ಯಾಮರದಲ್ಲಿ ಪತ್ತೆಹಚ್ಚಲಾಗಿದ್ದು ಚಿರತೆ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿಯೇ ಸಂಚರಿಸುತ್ತಿದೆ ಎಂದು ಅರಣ್ಯ ಇಲಾಖೆಯ ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಪಾದಯಾತ್ರಿಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿಯಲು ಈಗಾಗಲೇ ಕಾರ್ಯಾಚರಣೆ ಮುಂದುವರಿಸಲಾಗಿದೆ ಡ್ರೋನ್ ಕ್ಯಾಮರದಲ್ಲಿ ಚಿರತೆ ಚಲನವಲನದ ಬಗ್ಗೆ ನಿಗ ವಹಿಸಲಾಗಿದ್ದು ಚಿರತೆ ಇರುವ ಸ್ಥಳವನ್ನು ಖಚಿತಪಡಿಸಿಕೊಳ್ಳಲಾಗಿದೆ. ಅತಿ ಶೀಘ್ರದಲ್ಲಿಯೇ ಚಿರತೆಯನ್ನು ಸೆರೆ ಹಿಡಿಯಲಾಗುವುದು ಎಂದು ಮಲೆ ಮಹದೇಶ್ವರ ವನ್ಯ ಧಾಮ ಡಿಸಿಎಫ್  ಭಾಸ್ಕರ್ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

12 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

12 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

12 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

12 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

12 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

12 hours ago