ಚಾಮರಾಜನಗರ

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆ ಹಿಡಿಯುವ ಕಾರ್ಯಚರಣೆ ಮುಂದುವರೆದಿದ್ದು ಡ್ರೋನ್ ಕ್ಯಾಮೆರಾದಲ್ಲಿ ಚಿರತೆ ಚಲನ ವಲನದ ನಿಗಾವಹಿಸಲಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದ ಪ್ರವೀಣ್ ಹಾಗೂ ಸ್ನೇಹಿತರು ಪಾದಯಾತ್ರೆಯ ಮೂಲಕ ಜನವರಿ 21ರ ಬುಧವಾರ ಬೆಳಗ್ಗೆ ತಾಳಬೆಟ್ಟದಿಂದ ಪಾದಯಾತ್ರೆ ಹೊರಟಿದ್ದರು. ರಂಗಸ್ವಾಮಿ ಒಡ್ಡಿನ ಸಮೀಪ ಪಾದಯಾತ್ರೆ ತೆರಳುತ್ತಿದ್ದ ಪ್ರವೀಣನ ಮೇಲೆ ಬೃಹತ್ ಗಾತ್ರದ ಚಿರತೆ ದಾಳಿ ನಡೆಸಿ ಅರಣ್ಯಕ್ಕೆ ಎಳೆದೊಯ್ಯುತ್ತಿತ್ತು ಪರಿಣಾಮ ಪ್ರವೀಣ್ ಅರಣ್ಯದಲ್ಲಿ ಮೃತಪಟ್ಟಿದ್ದರು.

ಈ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ ಚಿರತೆಯನ್ನು ಸೆರೆ ಹಿಡಿಯುವಂತೆ ಸೂಚನೆ ನೀಡಿದ್ದರು. ಅವರ ಸೂಚನೆಯಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಹಾಗೂ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

ರಂಗಸ್ವಾಮಿ ಒಡ್ಡಿನ ಸಮೀಪ ಆಗಾಗ ಕಾಣಿಸಿಕೊಳ್ಳುತ್ತಿದ್ದ ಸಮೀಪದಲ್ಲಿ ಚಿರತೆ ಸೆರೆ ಹಿಡಿಯಲು ಎರಡು ಬೋನುಗಳನ್ನು ಇಡಲಾಗಿದ್ದು ಬೋನಿನಲ್ಲಿ ಎರಡು ನಾಯಿಗಳನ್ನು ಸಹ ಕಟ್ಟಲಾಗಿದೆ. ಜೊತೆಗೆ, ಚಿರತೆ ಕಾರ್ಯಾಪಡೆ, ಕೂಬಿಂಗ್,ಡ್ರೋನ್ ತಂಡ ಸ್ಥಳದಲ್ಲಿಯೇ ಇದ್ದು ಚಿರತೆ ಸೆರಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಚಿರತೆಯು ರಂಗಸ್ವಾಮಿ ಒಡ್ಡಿನ ಸಮೀಪದಲ್ಲಿಯೇ ಸಂಚರಿಸುತ್ತಿರುವುದನ್ನು ಡ್ರೋನ್ ಕ್ಯಾಮರದಲ್ಲಿ ಪತ್ತೆಹಚ್ಚಲಾಗಿದ್ದು ಚಿರತೆ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿಯೇ ಸಂಚರಿಸುತ್ತಿದೆ ಎಂದು ಅರಣ್ಯ ಇಲಾಖೆಯ ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಪಾದಯಾತ್ರಿಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿಯಲು ಈಗಾಗಲೇ ಕಾರ್ಯಾಚರಣೆ ಮುಂದುವರಿಸಲಾಗಿದೆ ಡ್ರೋನ್ ಕ್ಯಾಮರದಲ್ಲಿ ಚಿರತೆ ಚಲನವಲನದ ಬಗ್ಗೆ ನಿಗ ವಹಿಸಲಾಗಿದ್ದು ಚಿರತೆ ಇರುವ ಸ್ಥಳವನ್ನು ಖಚಿತಪಡಿಸಿಕೊಳ್ಳಲಾಗಿದೆ. ಅತಿ ಶೀಘ್ರದಲ್ಲಿಯೇ ಚಿರತೆಯನ್ನು ಸೆರೆ ಹಿಡಿಯಲಾಗುವುದು ಎಂದು ಮಲೆ ಮಹದೇಶ್ವರ ವನ್ಯ ಧಾಮ ಡಿಸಿಎಫ್  ಭಾಸ್ಕರ್ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

46 mins ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

1 hour ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

2 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

11 hours ago