ಚಾಮರಾಜನಗರ

ಮಹಾಲಯ ಅಮಾವಾಸ್ಯೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ಎಣ್ಣೆಮಜ್ಜನ ಸೇವೆ

ಹನೂರು: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ಸ್ವಾಮಿಗೆ ಎಣ್ಣೆಮಜ್ಜನ ಸೇವೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಹಾಲಯ ಜಾತ್ರೆ ಅಮಾವಾಸ್ಯೆ ಅಂಗವಾಗಿ ದೇಗುಲವನ್ನು ವಿವಿಧ ಬಗೆಯ ಪುಷ್ಪಗಳು ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಸ್ಥಾನದ ಹೊರ ಆವರಣ, ಒಳ ಆವರಣ ರಾಜಗೋಪುರ, ಬಸ್ ನಿಲ್ದಾಣ ಸೇರಿದಂತೆ ಇನ್ನಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಇಂದು ಸಂಜೆ ಬೇಡಕಂಪಣ ಸರದಿ ಅರ್ಚಕರು ಮಾದಪ್ಪನಿಗೆ ವಿವಿಧ ಅಭಿಷೇಕ ನೆರವೇರಿಸಿದರು. ಬಳಿಕ ಎಣ್ಣೆ ಮಜ್ಜನ ಸೇವೆ ನೆರವೇರಿಸಿ ಮಾದಪ್ಪನ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಯಿತು. ದೀಪ ದೀಪದಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು. ಈ ಮೂಲಕ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆಯು ಸಾಂಪ್ರದಾಯಿಕವಾಗಿ ನೆರವೇರಿತು.

ಇಂದು ಬೆಳಿಗ್ಗೆ 8 ಗಂಟೆಯ ಸಮಯದಲ್ಲಿ ನಡೆದ ಬೆಳ್ಳಿ ರಥೋತ್ಸವ, ಹುಲಿವಾಹನ, ರುದ್ರಾಕ್ಷಿ ಮಂಟಪ ಬಸವ ವಾಹನ, ರಾತ್ರಿ ಚಿನ್ನದ ರಥೋತ್ಸವದಲ್ಲಿ ಸಾವಿರಾರು ಸಾರ್ವಜನಿಕರು ಪಾಲ್ಗೊಂಡಿದ್ದರು. ಹರಕೆ ಹೊತ್ತು ಸಾರ್ವಜನಿಕರು ದೇಗುಲದ ಸುತ್ತ ದಂಡಿನ ಕೋಲು ಹೊತ್ತು ಪ್ರದಕ್ಷಿಣೆ ಹಾಕುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು. ಅಲ್ಲಿ ನೆರೆದಿದ್ದ ಎಲ್ಲರೂ ಮಹದೇಶ್ವರನಿಗೆ ಘೋಷಣೆ ಕೂಗಿ ಭಕ್ತಿ ಭಾವ ಮೆರೆದರು.

ಮಹಾಲಯ ಅಮಾವಾಸ್ಯೆ ಜಾತ್ರೆಗೆ ಆಗಮಿಸಿದ್ದ ಸಾವಿರಾರು ಜನರು ಮುಡಿ ಸೇವೆ, ಉರುಳು ಸೇವೆ, ಪಂಜಿನ ಸೇವೆ ಹಾಗೂ ರಜಾ ಹೊಡೆಯುವ ಸೇವೆಗಳಲ್ಲಿ ಭಾಗವಹಿಸಿ ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು.

ದೇವಸ್ಥಾನದ ಹೊರ ಆವರಣದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದ ಹಿನ್ನೆಲೆ ಉರುಳು ಸೇವೆಗೆ ತೊಂದರೆಯಾಗಿತ್ತು. ಈ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ದೇವಸ್ಥಾನದ ಹೊರ ಆವರಣದಲ್ಲಿ ಬಿಸಿಲಿನ ವೇಳೆ ನಿರಂತರವಾಗಿ ನೀರು ಸಿಂಪಡಣೆ ಮಾಡುವ ಮೂಲಕ ಸಾರ್ವಜನಿಕರ ಉರುಳು ಸೇವೆಗೆ ಅವಕಾಶ ಮಾಡಿಕೊಟ್ಟರು.

ಸಾರ್ವಜನಿಕರಿಗೆ ಸಂತಸ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದಲ್ಲಿ ಇತ್ತೀಚೆಗೆ ಕೆಲವೊಂದು ಬದಲಾವಣೆ ತಂದು ಬೆಳಗಿನ ಸಮಯದಲ್ಲಿ ಉಪ್ಪಿಟ್ಟು, ಕೇಸರಿಬಾತು, ಪಲಾವ್, ಚಿತ್ರಾನ್ನ ಪುಳಿಯೋಗರೆ ಮಾಡಲಾಗುತ್ತಿದೆ. ಅದೇ ರೀತಿ ಮಧ್ಯಾಹ್ನದ ಊಟಕ್ಕೆ ಪಾಯಸ, ಸಿಹಿ ಬೂಂದಿ, ಅನ್ನ, ಸಾಂಬಾರ್, ಪಲ್ಯ, ಮಜ್ಜಿಗೆ ಹುಳಿ ವಿತರಣೆ ಮಾಡಲಾಗುತ್ತಿದೆ. ದಾಸೋಹ ಭವನದಲ್ಲಿ ಪ್ರಸಾದ ಬದಲಾವಣೆ ಮಾಡಿರುವುದಕ್ಕೆ ಬೆಂಗಳೂರಿನ ಶಾಂತಿ ಸಾಗರ್ ಹೋಟೆಲ್ ಮಾಲೀಕರು ಪ್ರಸಾದ ಸ್ವೀಕರಿಸಿ ಪ್ರಾಧಿಕಾರದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಸಾದ ಬಡಿಸಿದ ಕಾರ್ಯದರ್ಶಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದ ಪರಿಶೀಲನೆಗೆ ತೆರಳಿದ ಕಾರ್ಯದರ್ಶಿಗಳು ಸ್ವತಃ ಸಾರ್ವಜನಿಕರಿಗೆ ಪ್ರಸಾದ ಬಡಿಸಿದ್ದಾರೆ. ಬಳಿಕ ಅಲ್ಲಿ ಜನರ ಜೊತೆಯಲ್ಲಿ ಕುಳಿತು ಪ್ರಸಾದ ಸ್ವೀಕರಿಸುವ ಮೂಲಕ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ.

ಮಹಾಲಯ ಜಾತ್ರಾ ಮಹೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ದಾಸೋಹದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿ, ಗುಣಮಟ್ಟದ ತರಕಾರಿ ಹಾಗೂ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಪ್ರಸಾದ ತಯಾರು ಮಾಡಿ ವಿತರಿಸಲಾಗುತ್ತಿದೆ. ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆಯುವ ಜನರಿಗೆ ಶುದ್ಧ ಕುಡಿಯುವ ನೀರು, ಜರ್ಮನ್ ಟೆಂಟ್ ಗಳನ್ನು ಹಾಕುವ ಮೂಲಕ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

8 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago