ಚಾಮರಾಜನಗರ

ಮಹಾಲಯ ಅಮಾವಾಸ್ಯೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ಎಣ್ಣೆಮಜ್ಜನ ಸೇವೆ

ಹನೂರು: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ಸ್ವಾಮಿಗೆ ಎಣ್ಣೆಮಜ್ಜನ ಸೇವೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಹಾಲಯ ಜಾತ್ರೆ ಅಮಾವಾಸ್ಯೆ ಅಂಗವಾಗಿ ದೇಗುಲವನ್ನು ವಿವಿಧ ಬಗೆಯ ಪುಷ್ಪಗಳು ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಸ್ಥಾನದ ಹೊರ ಆವರಣ, ಒಳ ಆವರಣ ರಾಜಗೋಪುರ, ಬಸ್ ನಿಲ್ದಾಣ ಸೇರಿದಂತೆ ಇನ್ನಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಇಂದು ಸಂಜೆ ಬೇಡಕಂಪಣ ಸರದಿ ಅರ್ಚಕರು ಮಾದಪ್ಪನಿಗೆ ವಿವಿಧ ಅಭಿಷೇಕ ನೆರವೇರಿಸಿದರು. ಬಳಿಕ ಎಣ್ಣೆ ಮಜ್ಜನ ಸೇವೆ ನೆರವೇರಿಸಿ ಮಾದಪ್ಪನ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಯಿತು. ದೀಪ ದೀಪದಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು. ಈ ಮೂಲಕ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆಯು ಸಾಂಪ್ರದಾಯಿಕವಾಗಿ ನೆರವೇರಿತು.

ಇಂದು ಬೆಳಿಗ್ಗೆ 8 ಗಂಟೆಯ ಸಮಯದಲ್ಲಿ ನಡೆದ ಬೆಳ್ಳಿ ರಥೋತ್ಸವ, ಹುಲಿವಾಹನ, ರುದ್ರಾಕ್ಷಿ ಮಂಟಪ ಬಸವ ವಾಹನ, ರಾತ್ರಿ ಚಿನ್ನದ ರಥೋತ್ಸವದಲ್ಲಿ ಸಾವಿರಾರು ಸಾರ್ವಜನಿಕರು ಪಾಲ್ಗೊಂಡಿದ್ದರು. ಹರಕೆ ಹೊತ್ತು ಸಾರ್ವಜನಿಕರು ದೇಗುಲದ ಸುತ್ತ ದಂಡಿನ ಕೋಲು ಹೊತ್ತು ಪ್ರದಕ್ಷಿಣೆ ಹಾಕುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು. ಅಲ್ಲಿ ನೆರೆದಿದ್ದ ಎಲ್ಲರೂ ಮಹದೇಶ್ವರನಿಗೆ ಘೋಷಣೆ ಕೂಗಿ ಭಕ್ತಿ ಭಾವ ಮೆರೆದರು.

ಮಹಾಲಯ ಅಮಾವಾಸ್ಯೆ ಜಾತ್ರೆಗೆ ಆಗಮಿಸಿದ್ದ ಸಾವಿರಾರು ಜನರು ಮುಡಿ ಸೇವೆ, ಉರುಳು ಸೇವೆ, ಪಂಜಿನ ಸೇವೆ ಹಾಗೂ ರಜಾ ಹೊಡೆಯುವ ಸೇವೆಗಳಲ್ಲಿ ಭಾಗವಹಿಸಿ ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು.

ದೇವಸ್ಥಾನದ ಹೊರ ಆವರಣದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದ ಹಿನ್ನೆಲೆ ಉರುಳು ಸೇವೆಗೆ ತೊಂದರೆಯಾಗಿತ್ತು. ಈ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ದೇವಸ್ಥಾನದ ಹೊರ ಆವರಣದಲ್ಲಿ ಬಿಸಿಲಿನ ವೇಳೆ ನಿರಂತರವಾಗಿ ನೀರು ಸಿಂಪಡಣೆ ಮಾಡುವ ಮೂಲಕ ಸಾರ್ವಜನಿಕರ ಉರುಳು ಸೇವೆಗೆ ಅವಕಾಶ ಮಾಡಿಕೊಟ್ಟರು.

ಸಾರ್ವಜನಿಕರಿಗೆ ಸಂತಸ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದಲ್ಲಿ ಇತ್ತೀಚೆಗೆ ಕೆಲವೊಂದು ಬದಲಾವಣೆ ತಂದು ಬೆಳಗಿನ ಸಮಯದಲ್ಲಿ ಉಪ್ಪಿಟ್ಟು, ಕೇಸರಿಬಾತು, ಪಲಾವ್, ಚಿತ್ರಾನ್ನ ಪುಳಿಯೋಗರೆ ಮಾಡಲಾಗುತ್ತಿದೆ. ಅದೇ ರೀತಿ ಮಧ್ಯಾಹ್ನದ ಊಟಕ್ಕೆ ಪಾಯಸ, ಸಿಹಿ ಬೂಂದಿ, ಅನ್ನ, ಸಾಂಬಾರ್, ಪಲ್ಯ, ಮಜ್ಜಿಗೆ ಹುಳಿ ವಿತರಣೆ ಮಾಡಲಾಗುತ್ತಿದೆ. ದಾಸೋಹ ಭವನದಲ್ಲಿ ಪ್ರಸಾದ ಬದಲಾವಣೆ ಮಾಡಿರುವುದಕ್ಕೆ ಬೆಂಗಳೂರಿನ ಶಾಂತಿ ಸಾಗರ್ ಹೋಟೆಲ್ ಮಾಲೀಕರು ಪ್ರಸಾದ ಸ್ವೀಕರಿಸಿ ಪ್ರಾಧಿಕಾರದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಸಾದ ಬಡಿಸಿದ ಕಾರ್ಯದರ್ಶಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದ ಪರಿಶೀಲನೆಗೆ ತೆರಳಿದ ಕಾರ್ಯದರ್ಶಿಗಳು ಸ್ವತಃ ಸಾರ್ವಜನಿಕರಿಗೆ ಪ್ರಸಾದ ಬಡಿಸಿದ್ದಾರೆ. ಬಳಿಕ ಅಲ್ಲಿ ಜನರ ಜೊತೆಯಲ್ಲಿ ಕುಳಿತು ಪ್ರಸಾದ ಸ್ವೀಕರಿಸುವ ಮೂಲಕ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ.

ಮಹಾಲಯ ಜಾತ್ರಾ ಮಹೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ದಾಸೋಹದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿ, ಗುಣಮಟ್ಟದ ತರಕಾರಿ ಹಾಗೂ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಪ್ರಸಾದ ತಯಾರು ಮಾಡಿ ವಿತರಿಸಲಾಗುತ್ತಿದೆ. ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆಯುವ ಜನರಿಗೆ ಶುದ್ಧ ಕುಡಿಯುವ ನೀರು, ಜರ್ಮನ್ ಟೆಂಟ್ ಗಳನ್ನು ಹಾಕುವ ಮೂಲಕ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago