ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಹನೂರು: ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿ ಎಂದು ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ಬಣ್ಣಿಸಿದರು.

ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಡೀ ವಿಶ್ವಕ್ಕೆ ರಾಮರಾಜ್ಯವನ್ನು ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ. ದೇಶದ ಅನೇಕ ಭಾಷೆಗಳಲ್ಲಿ ರಾಮಾಯಣ ಮಹಾಕಾವ್ಯವನ್ನು ಆಧರಿಸಿ ರಚನೆಯಾಗಿದ್ದರು, ವಾಲ್ಮೀಕಿ ರಾಮಾಯಣಕ್ಕೆ ತನ್ನದೇ ಆದ ಮಹತ್ವವಿದೆ ಎಂದರು.

ವಾಲ್ಮೀಕಿ ರಾಮಾಯಣ ಬೋಧಿಸುವ ಆದರ್ಶಗಳನ್ನು ಬುದ್ಧ, ಬಸವ, ಕನಕದಾಸ, ಅಂಬೇಡ್ಕರ್ ರವರು ಕೂಡ ಬೋಧಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮಹನೀಯರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ ಕಾರ್ಯದರ್ಶಿ ಚಂದ್ರಶೇಖರ್, ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹಾದೇವಸ್ವಾಮಿ, ಜನಾರ್ಧನ್, ನಾಗರಾಜು, ಮಲ್ಲಿಕಾರ್ಜುನ್, ಸ್ವಾಮಿ, ಆಗಮಿಕರಾದ ಪ್ರಸಾದ್, ಕರವೀರಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

3 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

4 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

11 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

11 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

16 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

16 hours ago