ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ.
ಇಂದಿನಿಂದ ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ.
ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ ನೀಡಲಿದ್ದು, ಬೆಟ್ಟದಲ್ಲಿ ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಈ ಜಾತ್ರೆಗೆ ಲಕ್ಷಾಂತರ ಮಂದಿ ಬೆಟ್ಟಕ್ಕೆ ತೆರಳುವುದರಿಂದ ಇಂದಿನಿಂದ ಮಾರ್ಚ್.1ರವರೆಗೆ ಐದು ದಿನಗಳ ಕಾಲ ದ್ವಿಚಕ್ರ ವಾಹನ, ಆಟೋರಿಕ್ಷಾ, ಗೂಡ್ಸ್ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ.
ನಾಳೆ ಮಹಾಶಿವರಾತ್ರಿಯಂದು ಪವಾಡ ಪುರುಷ ಮಲೆ ಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ ನಡೆಯಲಿದ್ದು, ರಾತ್ರಿಯಿಡೀ ಜಾಗರಣೆ, ಉತ್ಸವ, ವಿಶೇಷ ಅಭಿಷೇಕ, ಪೂಜೆ-ಪುನಸ್ಕಾರಗಳು ನಡೆಯಲಿವೆ.
ಇನ್ನು ಫೆಬ್ರವರಿ.27ರಂದು ವಿಶೇಷ ಸೇವೆ ಉತ್ಸವಾಧಿಗಳು ನಡೆಯಲಿದ್ದು, 28ರಂದು ಅಮಾವಾಸ್ಯೆ ಪೂಜೆ ಹಾಗೂ ಮಾರ್ಚ್.1ರಂದು ಮಹದೇಶ್ವರನ ಮಹಾರಥೋತ್ಸವ ನಡೆಯಲಿದೆ.
ಐದು ದಿನಗಳ ಕಾಲ ಜಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಸಾರ್ವಜನಿಕರು ಪಾದಯಾತ್ರೆ ಮೂಲಕ ತೆರಳುತ್ತಿದ್ದಾರೆ. ಇನ್ನು ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…
ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…
ದಿನೇಶ್ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…
ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…