ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ.
ಇಂದಿನಿಂದ ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ.
ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ ನೀಡಲಿದ್ದು, ಬೆಟ್ಟದಲ್ಲಿ ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಈ ಜಾತ್ರೆಗೆ ಲಕ್ಷಾಂತರ ಮಂದಿ ಬೆಟ್ಟಕ್ಕೆ ತೆರಳುವುದರಿಂದ ಇಂದಿನಿಂದ ಮಾರ್ಚ್.1ರವರೆಗೆ ಐದು ದಿನಗಳ ಕಾಲ ದ್ವಿಚಕ್ರ ವಾಹನ, ಆಟೋರಿಕ್ಷಾ, ಗೂಡ್ಸ್ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ.
ನಾಳೆ ಮಹಾಶಿವರಾತ್ರಿಯಂದು ಪವಾಡ ಪುರುಷ ಮಲೆ ಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ ನಡೆಯಲಿದ್ದು, ರಾತ್ರಿಯಿಡೀ ಜಾಗರಣೆ, ಉತ್ಸವ, ವಿಶೇಷ ಅಭಿಷೇಕ, ಪೂಜೆ-ಪುನಸ್ಕಾರಗಳು ನಡೆಯಲಿವೆ.
ಇನ್ನು ಫೆಬ್ರವರಿ.27ರಂದು ವಿಶೇಷ ಸೇವೆ ಉತ್ಸವಾಧಿಗಳು ನಡೆಯಲಿದ್ದು, 28ರಂದು ಅಮಾವಾಸ್ಯೆ ಪೂಜೆ ಹಾಗೂ ಮಾರ್ಚ್.1ರಂದು ಮಹದೇಶ್ವರನ ಮಹಾರಥೋತ್ಸವ ನಡೆಯಲಿದೆ.
ಐದು ದಿನಗಳ ಕಾಲ ಜಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಸಾರ್ವಜನಿಕರು ಪಾದಯಾತ್ರೆ ಮೂಲಕ ತೆರಳುತ್ತಿದ್ದಾರೆ. ಇನ್ನು ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…