ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂ. ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ 6.30 ಗಂಟೆಯಲ್ಲಿ ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 8 ಗಂಟೆಯವರೆಗೂ ನಡೆಯಿತು.
ಈ ಬಾರಿ ಕ್ಷೇತ್ರಕ್ಕೆ ಸಾರ್ವಜನಿಕರು ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 1,94,49,243 ರೂ. ಸಂಗ್ರಹವಾಗಿದೆ. ಇದರ ಜೊತೆಗೆ 63 ಗ್ರಾಂ ಚಿನ್ನ ಮತ್ತು 1 ಕೆಜಿ 510 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಇದೆಲ್ಲದರ ಜೊತೆಗೆ ಹುಂಡಿಯಲ್ಲಿ ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 06 ನೋಟುಗಳು ಕೂಡ ಸಂಗ್ರಹವಾಗಿವೆ.
ಇದೇ ವೇಳೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕರಾದ ಗುರುಮಲ್ಲಯ್ಯ, ನಾಮನಿರ್ದೇಶಿತ ಸದಸ್ಯರಾದ ಗಂಗನ ತಿಮ್ಮಯ್ಯ, ಭಾಗ್ಯಮ್ಮ, ಮಹದೇವಪ್ಪ, ಚಾಮರಾಜನಗರ ಜಿಲ್ಲಾಡಳಿತ ಕಛೇರಿ ಶಶಿಕುಮಾರ್, ಬ್ಯಾಂಕ್ ನೌಕರರು, ಪೊಲೀಸ್ ಸಿಬ್ಬಂದಿಗಳು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ…
ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ…
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್…
ಬೆಂಗಳೂರು: ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿಯನ್ನು ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ…
ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ…
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್ ರಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.…