Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮಲೆ ಮಹದೇಶ್ವರ ಬೆಟ್ಟ : ರೂ.2.65ಕೋಟಿ ಹಣ ಸಂಗ್ರಹ

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ 2.65 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7.30 ಗಂಟೆಯವರೆಗೂ ನಡೆಯಿತು.

ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,65,04,712ರೂ. ನಗದು, 58 ಗ್ರಾಂ ಚಿನ್ನ ಹಾಗೂ 2,070  ಕೆಜಿ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇದಲ್ಲದೆ ಇ-ಹುಂಡಿಯಿಂದ 66,6104  ರೂ., 15 ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2,000 ರೂ. ಮುಖಬೆಲೆಯ 36 ನೋಟುಗಳು ಹುಂಡಿಯಲ್ಲಿ ಸಂಗ್ರಹವಾಗಿವೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾಧಿಕ್ಷಕ ಮಹದೇವ್, ಪ್ರಾಧಿಕಾರದ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಬಸವಣ್ಣ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು, ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

Tags:
error: Content is protected !!