ಚಾಮರಾಜನಗರ : ಮಹಾ ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಜಾತ್ರೆಗಾಗಿ ಫೆ. ೨೫ ರ ಬೆಳಿಗ್ಗೆ ೬ ಗಂಟೆಯಿಂದ ಮಾ.೧ರ ಸಂಜೆ ೭ ಗಂಟೆಯವರೆಗೆ ರವರೆಗೆ ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು (ಗೂಡ್ಸ್,ಆಟೊ ರಿಕ್ಷಾಗಳು ಸೇರಿದಂತೆ) ತೆರಳುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಜಿಲ್ಲೆ, ಹೊರ ಜಿಲ್ಲೆ, ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗಲಿದೆ. ಸದರಿ ರಸ್ತೆಯು ಅರಣ್ಮ ಪ್ರದೇಶ ಹಾಗೂ ಕಡಿದಾದ ತಿರುವುಗಳಿಂದ ಕೂಡಿದ್ದು ವಾಹನ ಸಂಚಾರದಲ್ಲಿ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವ ಕಾರಣ ದ್ವಿಚಕ್ರ ವಾಹನ,ತ್ರಿಚಕ್ರ ವಾಹನ(ಆಟೋ ರಿಕ್ಷಾ,ಗೂಡ್ಸ್ ವಾಹನಗಳು ಸೇರಿದಂತೆ) ಗಳು ಜಾತ್ರೆಗಾಗಿ ಮಲೆ ಮಹದೇಶ್ವರ ಬೆಟ್ಟ ತೆರಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…